DAKSHINA KANNADA
‘ಪುತ್ತಿಲ ಪುತ್ತೂರಿನಲ್ಲೇ ಬಿಜೆಪಿ ಸೇರ್ಪಡೆಗೆ ಕಾರ್ಯಕರ್ತರ ಪಟ್ಟು: ಪುತ್ತೂರಿನಲ್ಲಿ ತುರ್ತು ಸಭೆ ಕರೆದ ವರಿಷ್ಟರು ..!
ಪುತ್ತೂರು : ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಪುತ್ತೂರಿನಲ್ಲೇ ಪಕ್ಷ ಸೇರ್ಪಡೆಯಾಗಬೇಕೆಂದು ಬಿಜೆಪಿ ಕಾರ್ಯಕರ್ತರು ಕಾರ್ಯಕರ್ತರ ಪಟ್ಟು ಹಿಡಿದಿದ್ದು ಪುತ್ತೂರು ಬಿಜೆಪಿ ಕಛೇರಿ ಬಳಿ ಬಿಜೆಪಿ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪುತ್ತೂರು ಬಿಜೆಪಿ ಕಛೇರಿಗೆ ಆಗಮಿಸಿದ್ದು ಕಾರ್ಯಕರ್ತರು ಮತ್ತು ಮುಖಂಡರ ಜೊತೆ ಸಭೆ ನಡೆಸುತ್ತಿದ್ದಾರೆ. ಅರುಣ್ ಪುತ್ತಿಲರಿಗೆ ಯಾವುದೇ ಸ್ಥಾನಮಾನ ನೀಡದಂತೆಯೂ ಕಾರ್ಯಕರ್ತರು ಅಧ್ಯಕ್ಷರಿಗೆ ಒತ್ತಾಯ ಮಾಡಿದ್ದಾರೆ. ಹಿರಿಯ ಹಿಂದೂ ಮುಖಂಡ ಪ್ರಸಾದ್ ಭಂಡಾರಿ, ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಹಲವು ಬಿಜೆಪಿ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ.
You must be logged in to post a comment Login