Connect with us

    LATEST NEWS

    ಚೆನ್ನೈ ಮಳೆಯಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಕ್ಷಣೆ

    ಚೆನ್ನೈ ಡಿಸೆಂಬರ್ 05: ಮಿಚಾಂಗ್ ಚಂಡಮಾರುತದಿಂದಾಗಿ ಮುಳುಗಿರುವ ಚೆನ್ನೈನಲ್ಲಿ ಸಿಲುಕಿರುವ ಬಾಲಿವುಡ್ ನಟ ಅಮಿರ್ ಖಾನ್ ಅವರನ್ನು 24 ಗಂಟೆಗಳ ಬಳಿಕ ರಕ್ಷಿಸಲಾಗಿದೆ. ಚೆನ್ನೈನ ಕರಪಕಮ್‌ ಪ್ರದೇಶದಲ್ಲಿರುವ ನಟ ವಿಶಾಲ್‌ ಮನೆಯಲ್ಲಿ ಅಮೀರ್‌ ಖಾನ್‌ ಉಳಿದುಕೊಂಡಿದ್ದರು. ಎಡಬಿಡದೆ ಸುರಿದ ಮಳೆಯಿಂದಾಗಿ ಅವರಿರುವ ಪ್ರದೇಶ ಜಲಾವೃತಗೊಂಡು ಮನೆಯಿಂದ ಹೊರಬರಲಾರದೆ ಸಿಲುಕಿಕೊಂಡಿದ್ದರು.


    ಮಳೆಯಿಂದಾಗಿ ಮನೆಯ ಸುತ್ತಮುತ್ತ ನೀರು ತುಂಬಿರುವ ಬಗ್ಗೆ ನಟ ವಿಶಾಲ್‌ ಎಕ್ಸ್‌ ತಾಣದಲ್ಲಿ ಹಂಚಿಕೊಂಡಿದ್ದು, ತಕ್ಷಣ ಸಹಾಯಕ್ಕೆ ಧಾವಿಸಿ ರಕ್ಷಿಸಿದ್ದಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಇದಕ್ಕೂ ಮೊದಲು ಪೋಸ್ಟ್‌ ಮಾಡಿದ್ದ ಅವರು, ಸಹಾಯಕ್ಕೆ ಕರೆ ಮಾಡಿದ್ದೇನೆ ವಿದ್ಯುತ್‌, ವೈಫೈ, ಮೊಬೈಲ್‌ ನೆಟ್‌ವರ್ಕ್‌ ಕೂಡ ಕಟ್ ಆಗಿದೆ. ಮನೆಯ ಟೆರೆಸ್‌ ಮೇಲೆ ಸಣ್ಣ ಪ್ರಮಾಣದಲ್ಲಿ ಸಿಗ್ನಲ್‌ ದೊರೆತ ಕಾರಣ ಸಹಾಯ ಕೋರಲು ಸಾಧ್ಯವಾಯಿತು ಎಂದು ಬರೆದುಕೊಂಡಿದ್ದರು.

    ವಿಶಾಲ್‌, ರಕ್ಷಣಾ ಕಾರ್ಯಾಚರಣೆಯ ಪೋಟೊ ಹಂಚಿಕೊಂಡಿದ್ದು, ಅದರಲ್ಲಿ ವಿಶಾಲ್‌ ಸೇರಿದಂತೆ ಅಮೀರ್ ಖಾನ್‌, ಜ್ವಾಲಾ ಗುಟ್ಟಾ ಸಹ ಕಾಣಿಸಿಕೊಂಡಿದ್ದಾರೆ. ತಾಯಿಯ ಚಿಕಿತ್ಸೆಗಾಗಿ ಅಮೀರ್‌ ಖಾನ್‌ ಅವರು ಕೆಲವು ತಿಂಗಳ ಹಿಂದೆ ಚೆನ್ನೈನಲ್ಲಿ ವಾಸ್ತವ್ಯ ಹೂಡಿದ್ದರು

    Share Information
    Advertisement
    Click to comment

    You must be logged in to post a comment Login

    Leave a Reply