FILM
ನಟ ಅನಿರುದ್ಧ್ಗೆ 2 ವರ್ಷ ಕಿರುತೆರೆಯಲ್ಲಿ ನಿರ್ಬಂಧ ಹೇರಿದ ನಿರ್ಮಾಪಕ ಸಂಘ
ಬೆಂಗಳೂರು, ಆಗಸ್ಟ್ 20: ಕನ್ನಡ ಕಿರುತೆರೆಯ ಧಾರಾವಾಹಿ ‘ಜೊತೆ ಜೊತೆಯಲಿ’ ಸೀರಿಯಲ್ನ ನಾಯಕ ನಟ ಅನಿರುದ್ಧ್ ಅವರನ್ನು 2 ವರ್ಷಗಳ ಕಾಲ ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅವಕಾಶ ನೀಡದಂತೆ ನಿರ್ಮಾಪಕರ ಸಂಘ ನಿರ್ಧರಿಸಿದೆ.
ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ್ಗೆ ಅವಕಾಶ ಕೊಡದಂತೆ ನಿರ್ಧರಿಸಲಾಗಿದೆ’ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ. ಸಂಚಿಕೆ ನಿರ್ದೇಶಕರಾದ ಉತ್ತಮ್ ಮಧು ಅವನ್ನು ಶೂಟಿಂಗ್ ಸೆಟ್ನಲ್ಲಿ ಅನಿರುದ್ಧ್ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹೀಗಾಗಿ ಅವರನ್ನು ಸೀರಿಯಲ್ನಿಂದ ಕೈ ಬಿಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ಅನಿರುದ್ಧ್, ನನ್ನ ವಿರುದ್ಧದ ನಿರ್ಮಾಪಕರ ಸಂಘದ ಆರೋಪ ಸುಳ್ಳು. ಅವರ ಮಕ್ಕಳ ಮೇಲೆ ಪ್ರಮಾಣ ಮಾಡಿ ನನ್ನ ವಿರುದ್ಧ ಆರೋಪ ಮಾಡಲಿ, ನಾನೂ ನನ್ನ ಮಕ್ಕಳ ತಲೆ ಮೇಲೆ ಕೈ ಇಟ್ಟು ಅದಕ್ಕೆಲ್ಲ ಉತ್ತರಗಳನ್ನು ಕೊಡುತ್ತೇನೆ ಎಂದು ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ.
You must be logged in to post a comment Login