Connect with us

FILM

ನಟ,ನಿರ್ದೇಶಕ ರಕ್ಷಿತ್ ಶೆಟ್ಟಿಗೆ ಸಂಕಷ್ಟ ತಂದ ಕಾಪಿ ರೈಟ್ಸ್ ಉಲ್ಲಂಘನೆ ಆರೋಪ : 20 ಲಕ್ಷ ಠೇವಣಿ ಇಡುವಂತೆ ಹೈಕೋರ್ಟ್ ಆದೇಶ..!!

ಬೆಂಗಳೂರು : ನಟ,ನಿರ್ದೇಶಕ ರಕ್ಷಿತ್ ಶೆಟ್ಟಿಗೆ  ಕಾಪಿ ರೈಟ್ಸ್ ಉಲ್ಲಂಘನೆ ಆರೋಪ ಸಂಕಷ್ಟ ತಂದಿಟ್ಟಿದ್ದು  20 ಲಕ್ಷ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ ನೀಡಿದೆ.

ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಲ್ಲಿ ರಕ್ಷಿತ್ ಶೆಟ್ಟಿ  ಎಂಆರ್.ಟಿ ಮ್ಯೂಸಿಕ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲು ಏರಿತ್ತು. ಆದರೆ ರಕ್ಷಿತ್ ಶೆಟ್ಟಿ ದೆಹಲಿ ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ ಕಾಪಿ ರೈಟ್‍ ಉಲ್ಲಂಘನೆಗಾಗಿ 20 ಲಕ್ಷ ಠೇವಣಿ ಇಡಲು ಮತ್ತು ಇನ್ಸ್ಟಾದಲ್ಲಿ ಶೇರ್ ಮಾಡಿರೋ ಹಾಡು ತಗೆಯುವಂತೆ ಆದೇಶ ಹೊರಡಿಸಿದೆ.ರಕ್ಷಿತ್ ಶೆಟ್ಟಿ ವಿರುದ್ಧ ನ್ಯಾಯ ಎಲ್ಲಿದೆ ಸಾಂಗ್ ಕಾಪಿ ರೈಟ್ಸ್ ಉಲ್ಲಂಘನೆಯ ಆರೋಪ ಇದ್ದು, ಬ್ಯಾಚುಲರ್ಸ್ ಪಾರ್ಟಿ ಸಿನಿಮಾಗಾಗಿ ನ್ಯಾಯ ಎಲ್ಲಿದೆ ಸಾಂಗ್ ಅನಧಿಕೃತವಾಗಿ ಬಳಕೆ ಮಾಡಿದ್ದಾರೆಂಬ ದೂರಿದೆ.ರಕ್ಷಿತ್ ಶೆಟ್ಟಿ ಒಡೆತನದ ಪರಂವಾ ಸ್ಟುಡಿಯೋಸ್ ನಿರ್ಮಾಣ ಮಾಡಿರುವ ‘ಬ್ಯಾಚುಲರ್‌ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’, ‘ಒಮ್ಮೆ ನಿನ್ನನ್ನು..’ ಹಾಡುಗಳನ್ನು ಅನುಮತಿ ಪಡೆಯದೆ ,ಕಾನೂನು ಬಾಹಿರವಾಗಿ ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಕೇಸ್ ದಾಖಲಾಗಿತ್ತು.

 

ರಾಷ್ಟ್ರಧ್ವಜದ ಹತ್ತಿರವೇ ಬರದ ಹಕ್ಕಿ – ಕ್ಯಾಮರಾ ಟ್ರಿಕ್ಸ್ ನಲ್ಲಿ ವೈರಲ್ ವಿಡಿಯೋ

Share Information
Continue Reading
Advertisement
Click to comment

Leave a Reply

Your email address will not be published. Required fields are marked *