Connect with us

    DAKSHINA KANNADA

    ಪುತ್ತೂರು ಕಂಬಳದಲ್ಲಿ ಚಿತ್ರ ನಟಿಗೆ ಸಾನಿಯಾ ಅಯ್ಯರ್ ಗೆ ಮುಜುಗರ…!

    ಪುತ್ತೂರು, ಜನವರಿ 29: ನಗರದಲ್ಲಿ ನಡೆಯುತ್ತಿರುವ ಕೋಟಿ-ಚೆನ್ನಯ ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಅಭಿಮಾನಿಯೊಬ್ಬ ಕಿರಿಕ್ ಮಾಡಿರುವ ಘಟನೆ ನಡೆದಿದೆ.

    ಚಿತ್ರನಟಿ ಸಾನಿಯಾ ಅಯ್ಯರ್  ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ಅತಿಥಿಯಾಗಿ ಆಗಮಿಸಿದ್ದು, ವೇದಿಕೆಯಿಂದ ಇಳಿದು ಬರುವ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಸೆಲ್ಫಿ ಕೆಳುವ ನೆಪದಲ್ಲಿ ಸಾನಿಯಾ ಅಯ್ಯರ್ ಕೈ ಹಿಡಿದು ಎಳೆದಿರುವ ಆರೋಪ ಎದುರಾಗಿದೆ, ಇದರಿಂದ ಸಾನಿಯ ಅಯ್ಯರ್ ಮುಜುಗರಕ್ಕೊಳಗಾಗಿದ್ದರೆ.

    ಇದೇ ಅಭಿಮಾನಿ ಸಾನಿಯಾ ಅಯ್ಯರ್ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಐ ಲವ್ ಯೂ ಹೇಳುತ್ತಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷೀಕೇಶ್ ಸೊನವಣೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply