LATEST NEWS
” ಮೈತ್ರಿ ಮುಟ್ಟಿನ ಕಪ್ ” ಯೋಜನೆಗೆ ಕಾಂತಾರ ನಟಿ ಸಪ್ತಮಿಗೌಡ ರಾಯಭಾರಿ….!!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು ಸೆಪ್ಟೆಂಬರ್ 11: ರಾಜ್ಯ ಸರಕಾರದಲ್ಲಿರುವ ವಿವಿಧ ಸರ್ಕಾರಿ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿನಿಯರಿಗೆ ಗಾಗಿ ಜಾರಿ ಮಾಡಿರುವ ಮೈತ್ರಿ ಮುಟ್ಟಿನ ಕಪ್ ಗೆ ಕಾಂತಾರ ನಟಿ ಸಪ್ತಮಿ ಗೌಡ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಇಲ್ಲಿ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ನಟಿ ಸಪ್ತಮಿ ಗೌಡ, ಈ ಯೋಜನೆಯ ರಾಯಭಾರಿ ಸಿನಿಮಾ ನಟಿ ಸಪ್ತಮಿ ಗೌಡ, ‘‘ಶುಚಿ ನನ್ನ ಮೈತ್ರಿ‘ ಯೋಜನೆಯ ರಾಯಭಾರಿಯನ್ನಾಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಋತುಚಕ್ರದ ಕಾರಣಕ್ಕೆ ಹೆಣ್ಣುಮಕ್ಕಳು ಚಟುವಟಿಕೆಯಿಂದ ಹಿಂದೆ ಸರಿಯುವುದನ್ನು ತಡೆಯಲು ಮುಟ್ಟಿನ ಕಪ್ ಸಹಕಾರಿ. ನನ್ನ ವೈಯಕ್ತಿಕ ಅನುಭವದಿಂದ ಈ ಮಾತನ್ನು ಹೇಳುತ್ತಿದ್ದೇನೆ’‘ ಎಂದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
‘ನಾನು ಹದಿಹರೆಯದಲ್ಲಿದ್ದಾಗ ಮುಟ್ಟಿನ ಕಪ್ ಬಳಕೆ ಇರಲಿಲ್ಲ. ಆಗ ಬಳಸುತ್ತಿದ್ದ ಸ್ಯಾನಿಟರಿ ಪ್ಯಾಡ್ಗಳನ್ನು ವಿಲೇವಾರಿ ಮಾಡುವುದು ಸವಾಲಾಗಿತ್ತು. ಬಳಸಿದ ಪ್ಯಾಡ್ಗಳನ್ನು ಪೇಪರ್ಗಳಲ್ಲಿ ಸುತ್ತಿ, ಪ್ರತ್ಯೇಕವಾಗಿ ಎತ್ತಿಟ್ಟು, ಬಿಸಾಡುವುದು ಮುಜುಗರದ ವಿಷಯವಾಗಿತ್ತು. ಆದರೆ ಮುಟ್ಟಿನ ಕಪ್ ಈ ಎಲ್ಲ ಮುಜುಗರಗಳಿಂದ ಮುಕ್ತಿ ನೀಡಲಿದೆ’ ಎಂದರು.
You must be logged in to post a comment Login