LATEST NEWS
ಕಾಂಗ್ರೇಸ್ ತೊರೆದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್
ಮುಂಬಯಿ: ಕಳೆದ ಲೋಕಸಭಾ ಚುನಾವಣೆ ಸಂದರ್ಭ ಕಾಂಗ್ರೇಸ್ ಸೇರ್ಪಡೆಗೊಂಡಿದ್ದ ರಂಗೀಲಾ ನಟಿ ಊರ್ಮಿಳಾ ಮಾತೋಂಡ್ಕರ್ ಈಗ ಶಿವಸೇನೆಗೆ ಸೇರಲಿದ್ದಾರೆ. ನಟಿ ಊರ್ಮಿಳಾ ಡಿಸೆಂಬರ್ 1 ರಂದು ಶಿವಸೇನೆ ಪಕ್ಷ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಊರ್ಮಿಳಾ ಸೋತಿದ್ದರು. ನಂತರ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯದಿಂದ ಬೇಸತ್ತಿದ್ದ ಊರ್ಮಿಳಾ ಪಕ್ಷ ತೊರೆದಿದ್ದರು.
ಊರ್ಮಿಳಾ ಹೆಸರನ್ನು ರಾಜ್ಯಪಾಲರ ಕೋಟಾದಿಂದ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಲು ಶಿವಸೇನೆಯು ಗವರ್ನರ್ ಬಿ ಎಸ್ ಕೊಶ್ಯರಿಗೆ ಕಳುಹಿಸಲಾಗಿದೆ.
ಇತರ 11 ಜನರ ಹೆಸರನ್ನು ರಾಜ್ಯಪಾಲರ ಕೋಟಾದಿಂದ ನಾಮನಿರ್ದೇಶನ ಮಾಡಲು ಮೂರು ಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವು ರವಾನಿಸಿದೆ. ಈ 12 ಮಂದಿ ಪಟ್ಟಿಯನ್ನು ರಾಜ್ಯಪಾಲರೂ ಇನ್ನೂ ಅಂಗೀಕರಿಸಬೇಕಿದೆ.
You must be logged in to post a comment Login