Connect with us

    LATEST NEWS

    ಅಡ್ಡೂರು ಸೇತುವೆ ನಿರ್ಬಂಧ ಪರಿಶೀಲಿಸಲು ಉಸ್ತುವಾರಿ ಸಚಿವರ ಸೂಚನೆ

    ಮಂಗಳೂರು,ಸೆಪ್ಟೆಂಬರ್ 10:- ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನ ರಾಜ್ಯ ಹೆದ್ದಾರಿ ಸಂಪರ್ಕಕ್ಕೆ ಕೊಂಡಿಯಾಗಿರುವ ಫಲ್ಗುಣಿ ನದಿಯ ಪೊಳಲಿ ಸೇತುವೆಯಲ್ಲಿ ಲಾರಿ ಮತ್ತು ಬಸ್ಸುಗಳಿಗೆ ಹಾಕಿರುವ ನಿರ್ಬಂಧವನ್ನು ತೆರವು ಗೊಳಿಸುವ ಬಗ್ಗೆ ಪರಿಶೀಲಿಸಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.


    ಸೇತುವೆಯಲ್ಲಿ ನಿರ್ಭಂಧದಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿರುವ ಬಗ್ಗೆ ಅಹವಾಲುಗಳು ಬಂದಿವೆ. ಈ ಸಂಬಂಧ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ. ಚಂದ್ರಶೇಖರ ಭಂಡಾರಿ ಅವರು ಸಚಿವರಿಗೆ ಮನವಿ ಸಲ್ಲಿಸಿರುತ್ತಾರೆ. ಇದಕ್ಕೆ ಸ್ಪಂದಿಸಿರುವ ಸಚಿವರು, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಅಡ್ಡೂರು ಸೇತುವೆ ನಿರ್ಬಂಧ ತೆರವು ಬಗ್ಗೆ ಪರಿಶೀಲಿಸಿ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply