Connect with us

    DAKSHINA KANNADA

    ‘ಕಾಂತಾರ,ದ ಬಳಿಕ ದೈವರಾಧಕರ ಕೆಂಗಣ್ಣಿಗೆ ಗುರಿಯಾದ ‘ಕಲ್ಜಿಗ’,ಸಾಮಾಜಿಕ ಜಾಲತಾಣದಲ್ಲೂ ಬಾಯ್ಕಾಟ್ ಕಲ್ಜಿಗ ಅಭಿಯಾನ..!

    ಮಂಗಳೂರು : ಕನ್ನಡ ಸಿನಿಮಾದಲ್ಲಿ ಇದೀಗ ಮತ್ತೊಂದು ದೈವದ ಚಲನಚಿತ್ರ ಕಲ್ಜಿಗ ಬಿಡುಗಡೆಯಾಗಿದ್ದು ಕಾಂತಾರ ಬಳಿಕ‌ ಮತ್ತೊಂದು ಚಿತ್ರ ತೀವ್ರ ಚರ್ಚೆಗೆ ಕಾರಣವಾಗಿದೆ. ಬಹುನೀರೀಕ್ಷೆ ಇಟ್ಟುಕೊಂಡಿದ್ದ ಕಲ್ಜಿಗೆ ಸಿನಿಮಾ ದೈವರಾಧಕರ ಕೆಂಗಣ್ಣಿಗೆ( boycott kaljiga)  ಗುರಿಯಾಗಿದೆ.
    ಕಲ್ಜಿಗ ಸಿನಿಮಾದಲ್ಲಿ ಕರಾವಳಿಯ ಕಾರಣಿಕ ದೈವ ಕೊರಗಜ್ಜನ ಚಿತ್ರೀಕರಣ ಮಾಡಲಾಗಿದೆ ಎನ್ನಲಾಗಿದೆ. ಕೊರಗಜ್ಜನ ವೇಷಭೂಷಣ ಧರಿಸಿ ಸಿನಿಮಾದ ಶೂಟಿಂಗ್ ಗಾಗಿ ನರ್ತನ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದ್ದು ಸಿನಿಮಾ ತಂಡದ ವಿರುದ್ಧ ಮಂಗಳೂರಿನ ದೈವಾರಾಧನೆ ಸಂರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತ ಪಡಿಸಿದೆ. ಸಾಮಾಜಿಕ ಜಾಲತಾಣದಲ್ಲೂ ಬಾಯ್ಕಾಟ್ ಕಲ್ಜಿಗ ಅಭಿಯಾನ ಶುರುವಾಗಿದೆ. ಕೋಸ್ಟಲ್ ವುಡ್ ಕಲಾವಿದರೆ ನಿರ್ಮಿಸಿರುವ ಸ್ಯಾಂಡಲ್ ವುಡ್ ಸಿನಿಮಾದಲ್ಲಿ ಕೋಸ್ಟಲ್ ವುಡ್ ನ ನಟ ಅರ್ಜುನ್ ಕಾಪಿಕಾಡ್ ನಟಿಸಿದ್ದಾರೆ.

    ನಟ ಅರ್ಜುನ್ ಕಾಪಿಕಾಡ್ ಅವರು ಈ ಹಿಂದೆ ಹಲವು ತುಳು ಸಿನಿಮಾಗಳಲ್ಲಿ ನಟಿಸಿದ್ದಾರೆ.
    ಜನಪ್ರಿಯ ನಟ ದೇವದಾಸ್‌ ಕಪಿಕಾಡ್‌ ಅವರ ಪುತ್ರ ಅರ್ಜುನ್‌ ಕಾಪಿಕಾಡ್‌ ಅವರನ್ನು ದೊಡ್ಡಮಟ್ಟದಲ್ಲಿ ಕನ್ನಡ ಇಂಡಸ್ಟ್ರಿಗೆ ಪರಿಚಯಿಸುವ ಉದ್ದೇಶದಿಂದ ಕಲ್ಜಿಗ ಚಿತ್ರ ತಯಾರಾಗಿತ್ತು. ಆದರೆ ಚಿತ್ರಕ್ಕೆ ಬಿಡುಗಡೆಯಾದ ಕೂಡಲೇ ಕರಾವಳಿಯಲ್ಲೇ ವಿರೋಧ ವ್ಯಕ್ತವಾಗಿದೆ.

    ಸಿನಿಮಾದಲ್ಲಿ ಕೊರಗಜ್ಜ ದೈವದ ಅನುಕರಣೆ ಮಾಡಿ ಚಿತ್ರೀಕರಣ ಮಾಡಿರುವುದಕ್ಕೆ ದೈವರಾಧಕರ ಅಸಮಾಧಾನಕ್ಕೆ ಕಾರಣವಾಗಿದೆ. ಚಿತ್ರದ ವಿರುದ್ಧ ಕಾನೂನು ಹೋರಾಟ ನಡೆಸುವುದಕ್ಕೂ ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲೂ ಬಾಯ್ಕಾಟ್ ಕಲ್ಜಿಗ ಅಭಿಯಾನ ಆರಂಭಗೊಂಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply