Connect with us

LATEST NEWS

ಮೋದಿ ಮತ್ತೆ ಪ್ರಧಾನಿಯಾಗುವ ಮೂಲಕ ಭಾರತ ವಿಶ್ವಕ್ಕೆ ಗುರುವಾಗಲಿದೆ – ಮಾಜಿ ಸಚಿವ ಸುರೇಶ್ ಕುಮಾರ್

ಮೋದಿ ಮತ್ತೆ ಪ್ರಧಾನಿಯಾಗುವ ಮೂಲಕ ಭಾರತ ವಿಶ್ವಕ್ಕೆ ಗುರುವಾಗಲಿದೆ – ಮಾಜಿ ಸಚಿವ ಸುರೇಶ್ ಕುಮಾರ್

ಮಂಗಳೂರು ಎಪ್ರಿಲ್ 9: ದೇಶದ ಭದ್ರತೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಭಾರತವನ್ನು ಬಲಿಷ್ಠ ದೇಶವಾಗಿಸಲು ಹಗಲಿರುಳು ಶ್ರಮಿಸುತ್ತಿರುವ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಪ್ರಧಾನಮಂತ್ರಿಯ ನೇತೃತ್ವದಲ್ಲಿ ಮತ್ತೊಮ್ಮೆ ಪ್ರಚಂಡ ಬಹುಮತದ ಸರ್ಕಾರ ಬಂದಲ್ಲಿ ಭಾರತ ವಿಶ್ವಕ್ಕೆ ಗುರುವಾಗಲಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದರು.

ನಗರದ ಚಿಲಿಂಬಿಗುಡ್ಡೆಯ ಶ್ರೀ ರಾಮಾಂಜನೇಯ ಯುವಕ ಮಂಡಲದ ಸಭಾಂಗಣದಲ್ಲಿ ಮಂಗಳವಾರ ನಡೆದ 24ನೇ ವಾರ್ಡಿನ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. 1996ನೇ ಇಸವಿಯಿಂದ ದ.ಕ.ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದೆ.

ಹಾಲಿ ಸಂಸದ ಹಾಗೂ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬಹಳಷ್ಟಪ ಶ್ರಮಿಸಿದ್ದಾರೆ. ದ.ಕ.ಜಿಲ್ಲೆಗೆ ನಳಿನ್ ಕುಮಾರ್ ಅವರು ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕಾರಣದಲ್ಲಿ ದ.ಕ.ಜಿಲ್ಲೆಯಿಂದ ದೊಡ್ಡ ಮಟ್ಟಿನ ಅಪೇಕ್ಷೆ ಇಡಲಾಗಿದೆ. ಜನಸಾಮಾನ್ಯರಿಂದ ಹಿಡಿದು ಸೈನಿಕರವರೆಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ ಏಕೈಕ ಪ್ರಧಾನಿ ಮೋದಿ.

ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕಾದರೆ ಈ ಜಿಲ್ಲೆಯ ಜನತೆ ನಳಿನ್ ಕುಮಾರ್ ಕಟೀಲ್ ಅವರನ್ನು ಮೂರನೇ ಬಾರಿಗೆ ಗೆಲ್ಲಿಸಿ ಸಂಸತ್‌ಗೆ ಕಳಿಸ ಬೇಕು ಎಂದು ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *