LATEST NEWS
ಆಗುಂಬೆ ಘಾಟಿ- ಭಾರಿ ವಾಹನಗಳ ಸಂಚಾರ ನಿಷೇಧ

ಉಡುಪಿ ಜೂನ್ 24: ರಾಷ್ಟ್ರೀಯ ಹೆದ್ದಾರಿ 169ಎ ರ ಆಗುಂಭೆ ಘಾಟಿನಲ್ಲಿ ಅಕ್ಟೋಬರ್ 1 ರವರೆಗ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 169 ಎ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್ 15 ರ ವರೆಗೆ 12 ಟನ್ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಶೇಧಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

ಬದಲಿ ಮಾರ್ಗದ ವಿವರ: ಉಡುಪಿ – ಸಿದ್ದಾಪುರ – ಹೊಸಂಗಡಿ – ಬಾಳೆಬರೇ ಘಾಟ್ ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಮಂಗಳೂರು-ಕಾರ್ಕಳ-ಹೆಬ್ರಿ-ಸಿದ್ಧಾಪುರ-ಹೊಸಂಗಡಿ-ಬಾಳೆಬರೇ ಘಾಟ್ -ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.