LATEST NEWS
ನ.21 ಕ್ಕೆ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಕರಾವಳಿಗೆ
ನ.21 ಕ್ಕೆ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಕರಾವಳಿಗೆ
ಉಡುಪಿ, ಅಕ್ಟೋಬರ್ 19: ಕಾಂಗ್ರೆಸ್ ಯುವರಾಜ ಹಾಗೂ ಎ ಐ ಸಿ ಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಕರಾವಳಿಗೆ ಭೇಟಿ ನೀಡಲಿದ್ದಾರೆ.
ಇದೇ ನವೆಂಬರ್ 21 ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ಆಯೋಜಿಸಿರುವ ಮೀನುಗಾರರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಈ ಕುರಿತು ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಯು. ಆರ್. ಸಭಾಪತಿ ಕುಮಟಾದಲ್ಲಿ ನಡೆಯಲಿರುವ ಮೀನುಗಾರರ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಈ ಸಮಾವೇಶದಲ್ಲಿ 1 ಲಕ್ಷಕ್ಕೂ ಮಿಕ್ಕಿ ಮೀನುಗಾರರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಕೇಂದ್ರ ಸಂಪುಟದಲ್ಲಿ ಮೀನುಗಾರಿಕೆ ಪ್ರತ್ಯೇಕ ಖಾತೆ ಹಾಗೂ ಮೀನುಗಾರ ಸಮುದಾಯವನ್ನು ಎಸ್. ಟಿ ಪಂಗಡಕ್ಕೆ ಸೇರಿಸಬೇಕು ಹೀಗೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಸಮಾವೇಶ ಆಯೋಜಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
Facebook Comments
You may like
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬೈಸಿಕಲ್ ಏರಿದ ರಾಬರ್ಟ್ ವಾದ್ರಾ
ನನ್ನ ಹೆಸರಲ್ಲೇ ರಾಮನಿದ್ದಾನೆ..ನಮ್ಮೂರಿನ ರಾಮಮಂದಿರಕ್ಕೆ ದೇಣಿಗೆ ನೀಡುತ್ತೆನೆ – ಸಿದ್ದರಾಮಯ್ಯ
ಕರುಣೆ ಇಲ್ಲದ ಕೇಂದ್ರ ಸರಕಾರದಿಂದ ಹಗಲು ದರೋಡೆ – ರಮಾನಾಥ ರೈ
ಬಡವರ ಬಿಪಿಎಲ್ ಕಾರ್ಡ್ ಮಾತ್ರ ಬಿಜೆಪಿ ಸರಕಾರಕ್ಕೆ ಕಾಣೋದು – ಯುಟಿ ಖಾದರ್
ಬಿಲ್ಲವ ಸಮುದಾಯದ ವಿರುದ್ದ ವಿವಾದಾತ್ಮಕ ಹೇಳಿಕೆ:ಪಡುಮಲೆ ಕೋಟಿ ಚೆನ್ನಯರ ಗರಡಿಯಲ್ಲಿ ಜಗದೀಶ್ ಅಧಿಕಾರಿ ಕ್ಷಮೆಯಾಚನೆ
ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ಬಹುಮಾನ – ಪ್ರತಿಭಾ ಕುಳಾಯಿ
You must be logged in to post a comment Login