Connect with us

LATEST NEWS

ಎಕೆಎಂಎಸ್ ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣ – ಒಂಬತ್ತು ಆರೋಪಿಗಳ ಬಂಧನ

ಉಡುಪಿ ನವೆಂಬರ್ 6: ಕಳೆದ 2 ದಿನಗಳ ಹಿಂದೆ ನಡೆದ ಎಕೆಎಂಎಸ್ ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೋಲಿಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ 2 ದಿನಗಳಲ್ಲೇ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


ಬಂಧಿತರನ್ನು ದರ್ಶನ್ ದೇವಯ್ಯ ವಿರಾಜಪೇಟೆ, ಸೌಭಾಗ್ಯ, ಅನಿಲ್ ಕುಮಾರ್, ಮಹೇಶ್ ಬಾಬು ಹಿರಿಯಪಟ್ಣ, ಸೋಮು ಕೆ.ಆರ್.ನಗರ, ಸುಕೇಶ್ ಪೂಜಾರಿ, ಮೋಹನ್ ಬೆಳ್ತಂಗಡಿ, ಗೋಪಾಲ್ ಮೂಡುಬಿದಿರೆ, ಸಂತೋಷ್ ಮುಡುಮನೆ ಎಂದು ಗುರುತಿಸಲಾಗಿದೆ.

ಆರೋಪಿಗಳು ಕಾರ್ಕಳದ ಲಾಡ್ಜ್ ಒಂದರಲ್ಲಿ ತಲೆಮರೆಸಿಕೊಂಡಿದ್ದು, ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 2 ದಿನಗಳ ಹಿಂದೆ ಎಕೆಎಂಎಸ್ ಬಸ್ ಮಾಲಿಕ ಸೈಫುದ್ದೀನ್ ಹತ್ಯೆಗೆ ಯತ್ನ ನಡೆದಿತ್ತು. ಅವರ ಕಚೇರಿಗೆ ತಲವಾರು, ಮಾರಕಾಸ್ತ್ರ ಸಹಿತ ಆಗಮಿಸಿದ್ದ ಆರೋಪಿಗಳು ಹತ್ಯೆ ಯತ್ನ ನಡೆಸಿದ್ದರು. ಈ ವೇಳೆ ಸೈಫ್ ಮತ್ತು ಸ್ನೇಹಿತ ಅಕ್ರಂ ಸ್ವಲ್ಪದರಲ್ಲಿ ದಾಳಿಯಿಂದ ಪಾರಾಗಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *