Connect with us

DAKSHINA KANNADA

ಗೌರಿ ಲಂಕೇಶ್ ಹತ್ಯೆ ಖಂಡಿಸಿ ನಾಡಿನಾದ್ಯಂತ ಪ್ರತಿಭಟನೆಗಳು

Share Information

ಮಂಗಳೂರು,ಸೆಪ್ಟೆಂಬರ್ 06 :  ಪತ್ರಕರ್ತೆ , ಸಾಹಿತಿ , ಪ್ರಗತಿಪರ ಚಿಂತಕಿ , ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹತ್ಯೆ ಖಂಡಿಸಿ ಇಂದು ಅನೇಕ ಸಂಘಟನೆಗಳು, ಚಿಂತಕರು, ಪ್ರಗತಿಪರ ವಲಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದಾರೆ.
ಪಾಪ್ಯುಲರ್ ಫ್ರಂಟ್ ದ.ಕ.ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಪುರಭವನದ ಎದುರು ಭಾಗದಲ್ಲಿರುವ ಗಾಂಧೀ ಪ್ರತಿಮೆಯ ಮುಂಭಾಗದಲ್ಲಿ (06-09-2017 ಬುಧವಾರ) ಸಂಜೆ 4:00ಘಂಟೆಗೆ ಸರಿಯಾಗಿ ಬ್ರಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ಹಿರಿಯ ಪತ್ರಕರ್ತೆ ,ನಾಡಿನ ಸಾಕ್ಷಿ ಪ್ರಜ್ಞೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ DYFI -SFI ಹಾಗು ಎಲ್ಲಾ ಜನಪರ ಸಂಘಟನೆಗಳ ನೇತೃತ್ವದಲ್ಲಿ ತಾ.06.09.17 ಬುಧವಾರ ಸಂಜೆ 5 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಲಿದೆ.

ಪತ್ರಕರ್ತೆ , ಸಾಹಿತಿ , ಪ್ರಗತಿಪರ ಚಿಂತಕಿ , ಹೋರಾಟಗಾರ್ತಿ ಸಂಗಾತಿ ಗೌರಿ ಲಂಕೇಶ್ ಅವರ ಅಮಾನವೀಯ ಹತ್ಯೆ ಖಂಡಿಸಿ 6-9-2017) ರಂದು ಸಂಜೆ 4 ಘಂಟೆಗೆ ಸರಿಯಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ತಾಲೂಕಿನ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಹಿರಿಯ ಪತ್ರಕರ್ತೆ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್‌ರ ಬರ್ಬರ ಹತ್ಯೆಯನ್ನು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ.

ಪತ್ರಕರ್ತೆ ಗೌರಿ ಲಂಕೇಶ್‌ರ ಹತ್ಯೆ ಖಂಡಿಸಿ ಹಾಗೂ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು (ಸೆ.6)ಮಧ್ಯಾಹ್ನ 3 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


Share Information
Advertisement
Click to comment

You must be logged in to post a comment Login

Leave a Reply