Connect with us

LATEST NEWS

ತನಿಖೆಯಲ್ಲಿ ವಿಳಂಬ ನೀತಿ ಖಂಡಿಸಿ ಮತ್ತು ಕಾವ್ಯ ಕುಟುಂಬಕ್ಕೆ 25 ಲಕ್ಷ ಪರಿಹಾರ ಆಗ್ರಹಿಸಿ ಉಪವಾಸ ಸತ್ಯಗ್ರಹ

ಮಂಗಳೂರು,ಆಗಸ್ಟ್ 26 : ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಅವಳ ನಿಗೂಢ ಸಾವಿ ಕುರಿತು ಪೋಲಿಸ್ ತನಿಖೆಯಲ್ಲಿ ಯಾವುದೇ ಪ್ರಗತಿ ಆಗಿಲ್ಲ. ಕಾವ್ಯ ಪ್ರಕರಣದ ತನಿಖೆಯಲ್ಲಿ ಪೋಲಿಸರ ವಿಳಂಬ ನೀತಿ ಖಂಡಿಸಿ ಮತ್ತು ಕಾವ್ಯ ಕುಟುಂಬಕ್ಕೆ 25 ಲಕ್ಷ ಪರಿಹಾರ ಆಗ್ರಹಿಸಿ ಸರ್ವಕಾಲೇಜು ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಮಂಗಳೂರಿನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಆಯೋಜಿಸಿದ್ದ ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಗ್ರಹಲ್ಲಿ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕಾವ್ಯ ಳ ತಂದೆ- ತಾಯಿ ಕೂಡ ಈ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ರಾಷ್ಟ್ರ ಮಟ್ಟದ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದ ಕಾವ್ಯ ಜು.20 ರಂದು ಮೂಡಬಿದಿರೆಯ ಆಳ್ವಾಸ್ ಹಾಸ್ಟೆಲಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಳು.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *