Connect with us

LATEST NEWS

ಅಂಬಲಪಾಡಿ ಅಗ್ನಿದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ ನಿಧನ

ಉಡುಪಿ ಜುಲೈ 16: ಉಡುಪಿ ಅಂಬಲಪಾಡಿ ಬೈಪಾಸ್ ಸಮೀಪದ ಗಾಂಧಿನಗರದ ಮನೆಯೊಂದರಲ್ಲಿ ಸೋಮವಾರ ಬೆಳಗ್ಗಿನ ಜಾವ ಅಗ್ನಿ ಆನಾಹುತ ಸಂಭವಿಸಿ ಅಂಬಲಪಾಡಿಯ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ನಿನ್ನೆ ಮೃತಪಟ್ಟಿದ್ದರು. ಈ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರ ಪತ್ನಿಯೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.


ಅಶ್ವಿನಿ (50) ಮೃತ ದುರ್ದೈವಿ. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ಅಶ್ವಿನಿ ಮೃತಪಟ್ಟಿದ್ದಾರೆ. ಬೆಂಕಿ ಕೆನ್ನಾಲಿಗೆಗೆ ಗಂಭಿರವಾಗಿ ಗಾಯಗೊಂಡಿದ್ದ ಅಶ್ವಿನಿ ಉಸಿರಾಟ ಹಾಗೂ ಶಾಸ್ವಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಇನ್ನು ಅವರಿಬ್ಬರ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತಂದೆ-ತಾಯಿಯನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ.


ರಾತ್ರಿ ಊಟ ಮಾಡಿ ಮಲಗಿದ್ದ ವೇಳೆ, ವಿದ್ಯುತ್ ಶಾರ್ಟ್​ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ಬಿದ್ದಿತ್ತು. ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ಆವರಿಸಿದ್ದರಿಂದ ನಿದ್ರೆಗೆ ಜಾರಿದ್ದ ಇಡೀ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ಇಲಾಖೆ ಮತ್ತು ಸ್ಥಳೀಯರು ಸ್ಥಳಕ್ಕೆ ಧಾವಿಸಿದರು. ಮನೆಯೊಳಗೆ ದಟ್ಟ ಹೊಗೆ ಆವರಿಸಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಾರ್ಯಾಚರಣೆ ನಡೆಸಬೇಕಾಯಿತು. ಬಾತ್ ರೂಂನಲ್ಲಿ ಅಡಗಿಕೊಂಡಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ.

ಮನೆಯಲ್ಲಿ ಸೆಂಟ್ರಲ್ ಎಸಿ ಅಳವಡಿಸಿದ್ದರಿಂದ ಮತ್ತು ಕಡಿಮೆ ಗಾಳಿಯಿಂದ ಹೊಗೆ ಸೇವನೆಯಿಂದ ರಮಾನಂದ ಶೆಟ್ಟಿ ಸಾವನ್ನಪ್ಪಿದ್ದು, ಅಶ್ವಿನಿ ಶೆಟ್ಟಿ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನಪ್ಪಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *