Connect with us

    LATEST NEWS

    ಭಾರಿ ಮಹತ್ವ ಪಡೆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರು ಭೇಟಿ

    ಭಾರಿ ಮಹತ್ವ ಪಡೆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರು ಭೇಟಿ

    ಮಂಗಳೂರು ನವೆಂಬರ್ 13: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಾಳೆ ಮಂಗಳೂರಿಗೆ ಆಗಮಿಸಲಿದ್ದು, ಗುರುವಾರ ನಡೆಯುವ ಆರ್ ಎಸ್ ಎಸ್ ಬೈಠಕ್ ನಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ. ದೇಶದಲ್ಲಿ ನಡೆಯುತ್ತಿರುವ ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿಚಾರದ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

    ನಾಳೆ ಸಂಜೆ 5 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನವೆಂಬರ್ 8 ರಿಂದ 16 ರವರೆಗೆ ರಾಷ್ಟ್ರದಾದ್ಯಂತ ಆರ್ ಎಸ್ ಎಸ್ ಅಖಿಲ ಭಾರತ ಬೈಠಕ್ ನಡೆಯುತ್ತಿದ್ದು, ಏಕಕಾಲದಲ್ಲಿ ವಾರಣಾಸಿ ಹಾಗೂ ಮಂಗಳೂರಿನಲ್ಲಿ ಈ ಬೈಠಕ್ ನಡೆಯುತ್ತಿದೆ.

    ಮಂಗಳೂರಿನಲ್ಲಿ ನಡೆಯಲಿರುವ ಬೈಠಕ್ ನಲ್ಲಿ ಆರ್ ಎಸ್ ಎಸ್ ಸಹ ಕಾರ್ಯವಾಹ ಭೈಯ್ಯಾಜಿ ಜೋಷಿ ಭಾಗಿಯಾಗಿದ್ದು ದೇಶದ ವಿವಿಧೆಡೆಯಿಂದ 400ಕ್ಕೂ ಮಿಕ್ಕ ಪ್ರತಿನಿಧಿಗಳ ಪಾಲ್ಗೊಂಡಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುರುವಾರ ಸಂಘನಿಕೇತನದಲ್ಲಿ ಆರೆಸ್ಸೆಸ್ ಬೈಠಕ್ ನಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ದೇಶದಾದ್ಯಂತ ಸಂಚಲನ ಮೂಡಿಸಿರುವ ಅಯೋಧ್ಯೆ ರಾಮಮಂದಿರ ನಿರ್ಮಾಣ ಕುರಿತ ವಿಚಾರದ ಬಗ್ಗೆ ಅಮಿತ್ ಶಾ ಆರ್ ಎಸ್ ಎಸ್ ನಾಯಕರೊಂದಿಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.

    ಅಲ್ಲದೆ ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply