Connect with us

    DAKSHINA KANNADA

    ಫೆಬ್ರವರಿ 11 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ತೂರಿಗೆ

    ಪುತ್ತೂರು ಫೆಬ್ರವರಿ 2: ಕೇಂದ್ರ ಗೃಹಮಂತ್ರಿ ಅಮಿತ್ ಶಾ ಫೆಬ್ರವರಿ 11 ರಂದು ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ವರ್ಷಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಅವರು ಪುತ್ತೂರಿನ ತೆಂಕಿಲದಲ್ಲಿರುವ ವಿವೇಕಾನಂದ ಶಾಲಾ ಮೈದಾನದಲ್ಲಿ ಸಾರ್ವಜನಿಕರನ್ನು ಉದ್ಧೇಶಿಸಿ ಮಾತನಾಡಲಿದ್ದಾರೆ.


    ವಿವೇಕಾನಂದ ಕಾಲೇಜಿನಲ್ಲಿ ನಡೆಯುವ ಕೃಷಿಯಂತ್ರ ಮೇಳ ಕಾರ್ಯಕ್ರಮದಲ್ಲೂ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಹೈದರಾಬಾದ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಪುತ್ತೂರು ತಲುಪಲಿದ್ದಾರೆ‌.

     

    Share Information
    Advertisement
    Click to comment

    You must be logged in to post a comment Login

    Leave a Reply