Connect with us

LATEST NEWS

ಫೆಬ್ರವರಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಅಮಿತ್ ಷಾ ಪ್ರವಾಸ

ಫೆಬ್ರವರಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಅಮಿತ್ ಷಾ ಪ್ರವಾಸ

ಮಂಗಳೂರು ಫೆಬ್ರವರಿ 6: ರಾಜ್ಯ ವಿಧಾನಸಭೆ ಚುನಾವಣೆಯ ಕಾವು ಏರತೊಡಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪರಿವರ್ತನಾ ರಾಲಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಚುನಾವಣೆಯ ಪ್ರಚಾರ ಆರಂಭಿಸಿದ್ದಾರೆ.

ಈ ನಡುವೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ರಾಜ್ಯದ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಈಗಾಗಲೇ ಸಭೆಗಳನ್ನು ನಡೆಸಿ ಬಿಜೆಪಿ ಮುಖಂಡರಿಗೆ ಬಿಸಿ ಮುಟ್ಟಿಸಿದ್ದಾರೆ. ಅಲ್ಲದೆ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಪ್ರವಾಸಕ್ಕೆ ಅಮಿತ್ ಷಾ ತಂತ್ರ ರೂಪಿಸಿದ್ದು ಇದರ ಮೊದಲ ಭಾಗವಾಗಿ ಬಿಜೆಪಿಯ ಭದ್ರಕೋಟೆ ಯಾಗಿದ್ದ ಕರಾವಳಿ ಜಿಲ್ಲೆಗಳನ್ನು ಮತ್ತೆ ವಶ ಪಡಿಸಿಕೊಳ್ಳಲು ಅಮಿತ್ ಶಾ ತಂತ್ರ ರೂಪಿಸಿದ್ದು ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಫೆಬ್ರವರಿ 19ರಿಂದ ಮೂರು ದಿನಗಳ ಕಾಲ ರಾಜ್ಯ ಕರಾವಳಿ ಜಿಲ್ಲೆಗಳಿಗೆ ಅಮಿತ್ ಶಾ ಭೇಟಿ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ. ಫೆಬ್ರವರಿ 19ರಂದು ಮಂಗಳೂರು, ಫೆಬ್ರವರಿ 20ರಂದು ಉಡುಪಿ ಮತ್ತು ಫೆಬ್ರವರಿ 21ರಂದು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

ಆದರೆ ಅಮಿತ್ ಶಾ ಅವರ ಕರಾವಳಿಯ ಕಾರ್ಯಕ್ರಮ ಖಚಿತ ಗೊಂಡಿಲ್ಲ. ಅಮಿತ್ ಶಾ ಭೇಟಿ ಕರಾವಳಿ ರಾಜಕೀಯದಲ್ಲಿ ತಲ್ಲಣ ಎಬ್ಬಿಸಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *