Connect with us

LATEST NEWS

ಮಾರ್ಚ್ 14 ರಂದು ಅಮಿತ್ ಷಾ ಕರಾವಳಿ ಪ್ರವಾಸ

ಮಾರ್ಚ್ 14 ರಂದು ಅಮಿತ್ ಷಾ ಕರಾವಳಿ ಪ್ರವಾಸ

ಉಡುಪಿ ಫೆಬ್ರವರಿ 21: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಷಾ ಮಾರ್ಚ್ 14 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಲೋಕಸಭಾ ಚುನಾವಣೆಯ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ವಿವಿಧ ರಾಜಕೀಯ ಪಕ್ಷಗಳು ತಮ್ಮ ನಾಯಕರ ಪ್ರಚಾರ ಸಭೆಗಳನ್ನು ರೂಪಿಸುತ್ತಿವೆ.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಈ ನಡುವೆ ಅಮಿತ್ ಷಾ ಕರಾವಳಿ ಪ್ರವಾಸಕ್ಕೆ ಸಿದ್ದತೆ ನಡೆದಿದೆ. ರಾಜ್ಯ ಬಿಜೆಪಿ ಆರಂಭಿಸಿರುವ ಮೋದಿ ವಿಜಯ ಸಂಕಲ್ಪ ಯಾತ್ರೆ ಹಿನ್ನಲೆಯಲ್ಲಿ ಮಾರ್ಚ್ 14 ರಂದು ಉಡುಪಿ ಜಿಲ್ಲೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಆಗಮಿಸಲಿದ್ದಾರೆ.

ಮಾರ್ಚ್ 13 ರಂದು ಕೊಡಗಿನಲ್ಲಿ ವಿವಿಧ ಸಭೆಗಳಲ್ಲಿ ಭಾಗವಹಿಸಿ ಬಳಿಕ ಜಿಲ್ಲೆಗೆ ಆಗಮಿಸುವ ಅವರು ನಾಲ್ಕು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ, ಶಕ್ತಿ ಕೇಂದ್ರ ಪ್ರಮುಖರ ಸಭೆ, ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಲಿದ್ದಾರೆ. ಆದರೆ ಬಹಿರಂಗ ಸಭೆ ನಿಗಧಿಯಾಗಿಲ್ಲ ಎಂದು ಹೇಳಲಾಗಿದೆ. ಮಾರ್ಚ್ 14 ರ ಪ್ರವಾಸದಲ್ಲಿ ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಪ್ರವಾಸ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *