LATEST NEWS
ಆಂಧ್ರಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್ ರೆಡ್ಡಿ ಹೃದಯಾಘಾತದಿಂದ ನಿಧನ
ಹೈದರಾಬಾದ್ : ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಸಚಿವ ಸಚಿವ ಮೇಕಪತಿ ಗೌತಮ್ ರೆಡ್ಡಿ(49) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತ ಘಟನೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಗೌತಮ್ ರೆಡ್ಡಿ ಅವರಿಗೆ ಇಂದು ಬೆಳಗ್ಗೆ ಹಠಾತ್ ಹೃದಯಾಘಾತ ಉಂಟಾಗಿದೆ. ಈ ವೇಳೆ ಜೂಬ್ಲಿ ಹಿಲ್ಸ್ನ ಅಪೋಲೋ ಆಸ್ಪತ್ರೆಗೆ ರವಾನೆ ಮಾಡುತ್ತಿರುವಾಗಲೇ ದಾರಿಮಧ್ಯೆಯೇ ಅವರು ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ. ಗೌತಮ್ ರೆಡ್ಡಿ ಒಂದು ವಾರದ ಹಿಂದಷ್ಟೇ ದುಬೈ ಎಕ್ಸ್ಪೋದಲ್ಲಿ ಪಾಲ್ಗೊಂಡು ವಿವಿಧ ಕಂಪನಿಗಳ ಜೊತೆ ಆಂಧ್ರಪ್ರದೇಶದಲ್ಲಿ ಹೂಡಿಕೆ ಮಾಡುವ ಒಪ್ಪಂದ ಕುದುರಿಸಿದ್ದರು. ನಿನ್ನೆಯಷ್ಟೇ ದುಬೈಯಿಂದ ಹೈದರಾಬಾದ್ಗೆ ಬಂದಿಳಿದಿದ್ದರು.
You must be logged in to post a comment Login