Connect with us

    UDUPI

    ಎಂಡೋ ಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸಿ: ಸಚಿವ ಅಂಗಾರ

    ಉಡುಪಿ, ಸೆಪ್ಟಂಬರ್ 5 : ಉಡುಪಿ ಜಿಲ್ಲೆಯಲ್ಲಿನ ಎಂಡೋಸಲ್ಫಾನ್ ಬಾಧಿತರ ಆರೋಗ್ಯ ಸುಧಾರಣೆ ಮತ್ತು ಪುರ್ನವಸತಿಗೆ ಸಂಬದಪಟ್ಟ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.


    ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಎಂಡೋಸಲ್ಫಾನ್ ಸಾಮಾನ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾರ್ಚ್ 2019 ರಿಂದ ಇದುವರೆಗೆ ಹೊಸದಾಗಿ ಗುರುತಿಸಲಾಗಿರುವ 110 ಮಂದಿ ಎಂಡೋಸಲ್ಫಾನ್ ಬಾಧಿತರ ಪಟ್ಟಿಗೆ ಅನುಮೋದನೆ ನೀಡಿ ಅವರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುವಂತೆ ತಿಳಿಸಿದ ಸಚಿವರು, ಎಂಡೋ ಬಾಧಿತರಿಗೆ ಉಚಿತ ಪಡಿತರ ನೀಡುವ ಕುರಿತಂತೆ ಆರೋಗ್ಯ ಇಲಾಖೆಯಿಂದ ಭಾದಿತರ ಪಟ್ಟಿ ಪಡೆದು , ಅವರಿಗೆ ಅಂತ್ಯೋದಯ ಕಾರ್ಡ್ಗಳನ್ನು ವಿತರಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಎಂಡೋಸಲ್ಫಾನ್ ರಾಸಾಯನಿಕ ಸಿಂಪಡಣೆಯದ ಅವಧಿಯಲ್ಲಿ ಬಾಧಿತ ಪ್ರದೇಶದಲ್ಲಿ ಹುಟ್ಟಿ ಬೆಳೆದು ಅಥವಾ ವಾಸವಿದ್ದು ನಂತರದಲ್ಲಿ ಎಂಡೋಸಲ್ಫಾನ್ ಬಾಧಿತವಲ್ಲದ ಪ್ರದೇಶಗಳಿಗೆ ಬಂದು ನೆಲೆಸಿ ವಾಸವಿದು ಅಂಗವಿಕಲತೆಗೆ ಒಳಗಾದ ಅಥವಾ ಎಂಡೋಸಲ್ಫಾನ್ ಸಂಬಂದಿತ ಯಾವುದೇ ನ್ಯೂನತೆಗಳು ಕಂಡುಬಂದ ಅಥವಾ ಅವರಿಗೆ ಜನಿಸಿದ ಮಕ್ಕಳಿಗೆ ನ್ಯೂನತೆಗಳು ಕಂಡುಬಂದಾಗ ಅವರನ್ನು ಎಂಡೋಸಲ್ಫಾನ್ ಬಾಧಿತರೆಂದು ಪರಿಗಣಿಸುವ ಕುರಿತಂತೆ ಎಸ್.ಓ.ಪಿ ಯನ್ನು ರಚಿಸಿ ಅದರನ್ವಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು.

    ಎಂಡೋಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಕೆ.ಡಿ.ಪಿ ಸಭೆಗಳಲ್ಲಿ ಈ ಬಗ್ಗೆ ಚರ್ಚಾ ವಿಷಯವನ್ನಾಗಿ ಸೇರ್ಪಡೆ ಮಾಡುವಂತೆ ತಿಳಿಸಿದರು.
    ಕುಂದಾಪುರದ ಸೇನಾಪುರದಲ್ಲಿ ಎಂಡೋಸಲ್ಫಾನ್ ಪೀಡಿತ ಅಂಗವಿಕಲರಿಗೆ ಶಾಶ್ವತ ಪುರ್ನವಸತಿ ಕೇಂದ್ರ ಆರಂಭ, ಜಿಲ್ಲೆಯಲ್ಲಿ ಇವರಿಗಾಗಿ ಪ್ರತ್ಯೇಕ ಡೇ ಕೇರ್ ಸೆಂಟರ್ ಆರಂಬಿಸುವ ಬಗ್ಗೆ ಚರ್ಚೆ ನಡೆಯಿತು.

    Share Information
    Advertisement
    Click to comment

    You must be logged in to post a comment Login

    Leave a Reply