Connect with us

LATEST NEWS

ಶಿವಧೂತ ಗುಳಿಗನ ನಿಂದಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಕರಾವಳಿಗರ ಆಕ್ರೋಶ

ಮಂಗಳೂರು ಮಾರ್ಚ್ 16: ಕಾರ್ಯಕ್ರಮವೊಂದರಲ್ಲಿ ಶಿವಧೂತ ಗುಳಿಗ ನಾಟಕದ ಬಗ್ಗೆ ಅವಹೇಳನ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇದೀಗ ಕರಾವಳಿ ಜನ ಸಿಡಿದೆದ್ದಿದ್ದು ಭಾರೀ ಆಕ್ರೋಶ ಕೇಳಿ ಬಂದಿದೆ.


ಮಾರ್ಚ್ 15 ರಂದು ತೀರ್ಥಹಳ್ಳಿಯ ಸಾರ್ವಜನಿಕ ಕ್ರೀಡಾಂಗಣದಲ್ಲಿ ವಿಜಯ ಕುಮಾರ್ ಕೊಡಿಯಾಲಬೈಲ್ ರಚಿಸಿ ನಿರ್ದೇಶಿಸಿದ ‘ಶಿವದೂತೆ ಗುಳಿಗ’ ನಾಟಕ ಪ್ರದರ್ಶನ ಕಂಡಿದೆ. ಅಲ್ಲದೇ ಪ್ರಚಾರಕ್ಕೆ ಬ್ಯಾನರ್ ಗಳು ಮತ್ತು ಪೋಸ್ಟರ್ ಗಳನ್ನು ಅಂಟಿಸಲಾಗಿತ್ತು.
ಮರುದಿನ ಬಿಜೆಪಿಯಿಂದ ನಡೆದ ರೈತ ಸಮಾವೇಶದಲ್ಲಿ ಭಾಗವಹಿಸಿದ ಆರಗ ಜ್ಞಾನೇಂದ್ರ, ಕಿಮ್ಮನೆ ರತ್ನಾಕರ್ ಸಂಘಟಿಸಿದ ನಾಟಕಕ್ಕೆ ಹತ್ತು ಸಾವಿರಕ್ಕೂ ಹೆಚ್ಚು ಜನರು ಸೇರಿರುವುದು ತಿಳಿಯುತ್ತಲೇ ಸ್ವಲ್ಪ ವಿಚಲಿತರಾಗಿದ್ದಾರೆ. ಮಾತ್ರವಲ್ಲ ಅಸಹನೆಯಿಂದ ಸಭೆಯಲ್ಲಿ ತುಳುನಾಡಿನ ಜನರ ಆರಾಧ್ಯ ದೈವ ಗುಳಿಗನ ಬಗ್ಗೆ ಅಪಹಾಸ್ಯ ಮಾಡಿ ಮಾತನಾಡಿದ್ದು ದೈವಾರಾಧಕರು ಮತ್ತು ನಾಟಕ ಪ್ರಿಯರು ಆಕ್ರೋಶಗೊಳ್ಳುವಂತೆ ಮಾಡಿದೆ.


ಆರಗ ಹೇಳಿದ್ದೇನು..?: ಯಾವುದೋ ಗುಳಿಗೆ ಕೊಡ್ತಾರಂತೆ, ಜಪಾಲ್ ಗುಳಿಗೆ ಕೊಟ್ರು ಕೊಡಬಹುದು. ಹೊಸ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ನಿಂದಿಸಿರುವುದು ತೀರ್ಥಹಳ್ಳಿಯಲ್ಲಿ ನೆಲೆಸಿರುವ ದ.ಕ ಮೂಲದ ಜನರನ್ನು ಕೆರಳಿಸಿದೆ. ಗುಳಿಗ ದ.ಕ ಜಿಲ್ಲೆಯ ಜನರ ಆರಾಧ್ಯ ದೈವ. ಜನ ಶ್ರದ್ಧಾ ಭಕ್ತಿಯಿಂದ ನಡೆದುಕೊಳ್ಳುತ್ತಾರೆ. ಆ ದೈವದ ಬಗ್ಗೆ ವ್ಯಂಗ್ಯವಾಗಿ, ಅಸಹನೆಯಿಂದ, ಅಪಹಾಸ್ಯ ಮಾಡಿ ಗೃಹ ಸಚಿವರು ಮಾತನಾಡಿರುವುದು ಸರಿಯಲ್ಲ ಜನ ರೊಚ್ಚಿಗೆದ್ದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *