DAKSHINA KANNADA
ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರಿಗಿಲ್ಲ ಭದ್ರತೆ – ರಾಜ್ಯ ಸರಕಾರದ ವಿರುದ್ದ ಆಕ್ರೋಶ…!!
ಪುತ್ತೂರು ಜುಲೈ 27: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಇದೀಗ ರಾಜ್ಯ ಸರಕಾರದ ಹಿಂದೂ ಕಾರ್ಯಕರ್ತರು ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ‘ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರಿಗೆ ಭದ್ರತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಿಜೆಪಿ (BJP) ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಈ ನಡುವೆ ಕರಾವಳಿಯ ಬಿಜೆಪಿ ಮುಖಂಡರ ವಿರುದ್ಧ ಪ್ರವೀಣ್ ಕುಟುಂಬ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಬಿಜೆಪಿ ನಾಯಕರಾದ ಅಂಗಾರ, ಸುನಿಲ್ ಕುಮಾರ್, ನಳಿನ್ ಕುಮಾರ್ ಕಟೀಲ್ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ಪ್ರವೀಣ್ ಅವರ ಪಾರ್ಥೀವ ಶರೀರದ ಮೆರವಣಿಗೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಮೆರವಣಿಗೆ ವೇಳೆ ಅವಘಡವಾದರೆ ನೀವೇ ಹೊಣೆಗಾರರು ಎಂದು ಡಿವೈಎಸ್ಪಿ ಎಚ್ಚರಿಸಿದ್ದಾರೆ. ಆದರೆ ಸಂಬಂಧಿಕರು ಶಾಂತಿಯುತವಾಗಿ ಶೋಭಾಯಾತ್ರೆ ಮಾಡುತ್ತೇವೆ. ನಮ್ಮ ಶೋಭಾಯಾತ್ರೆಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಪೊಲೀಸರಲ್ಲಿ ವಿನಂತಿಸಿದ್ದಾರೆ.
You must be logged in to post a comment Login