Connect with us

    LATEST NEWS

    ಮತ್ತೆ 2 ಬಲಿ ಪಡೆದ ಕೊರೊನಾ ..ಸಾವಿನ ಸಂಖ್ಯೆ 24ಕ್ಕೆ ಏರಿಕೆ

    ಮಂಗಳೂರು ಜುಲೈ 6: ದಕ್ಷಿಣಕನ್ನಡದಲ್ಲಿ ಕೊರೊನೊ ಇಂದು ಮತ್ತೆ ಎರಡು ಬಲಿ ಪಡೆದುಕೊಂಡಿದೆ. ಇದರೊಂದಿಗೆ ದಕ್ಷಿಣಕನ್ನಡದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ದಕ್ಷಿಣಕನ್ನಡದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಆಘಾತಕಾರಿಯಾಗುತ್ತಿದ್ದು, ಪ್ರತಿದಿನ ಸಾವು ಸಂಭವಿಸುತ್ತಿದೆ.


    ಮಂಗಳೂರಿನ ತೊಕ್ಕೊಟ್ಟು ಬಳಿ ಸಂತೋಷ್ ನಗರದ ನಿವಾಸಿಯಾಗಿದ್ದ 52 ವರ್ಷದ ವ್ಯಕ್ತಿಯನ್ನು ಮಹಾಮಾರಿ ಬಲಿ ಪಡೆದಿದೆ. ಇವರು ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದು ಚಿಕಿತ್ಸೆ ನೀಡಲಾಗುತ್ತಿತ್ತು. ಕೊರೊನಾ ಇವರನ್ನು ಬಲಿ ಪಡೆದಿದೆ.
    ಇನ್ನು ಮತ್ತೊಂದು ಪ್ರಕರಣದಲ್ಲಿ ಉಳ್ಳಾಲ ಮೂಲದ 52 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇಂದು ಮದ್ಯಾಹ್ನದವರೆಗೆ ಕೊರೊನಾಗೆ ಇದು ಎರಡನೇ ಬಲಿಯಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 24 ಕ್ಕೆ ಏರಿಕೆ‌ಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply