Connect with us

BANTWAL

ಬಂಟ್ವಾಳ – ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ – ಮತ್ತೊಬ್ಬ ಆರೋಪಿ ಅರೆಸ್ಟ್

ಮಂಗಳೂರು ಜುಲೈ 01: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ.


ಬಂಧಿತನನ್ನು ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಎಂದು ಗುರುತಿಸಲಾಗಿದೆ. ಈಗಾಗಲೇ ಪ್ರಕರಣ ಸಂಬಂಧ ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *