Connect with us

    DAKSHINA KANNADA

    ಮಂಗಳೂರು ನಗರದಲ್ಲಿ ಮತ್ತೊಂದು ದರೋಡೆ ಪ್ರಕರಣ, ವೃದ್ಧರನ್ನು ಹಲ್ಲೆ ಮಾಡಿ ಕೂಡಿಹಾಕಿ ಕಾರೊಂದಿಗೆ ಪರಾರಿ..!

    ಮಂಗಳೂರು, ಜುಲೈ 09 : ಮಂಗಳೂರು ನಗರದಲ್ಲಿ ಮತ್ತೆ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಬಳಿ  ಇಂದು ಬೆಳಗ್ಗಿನ ಜಾವಾ ಈ ದರೋಡೆ ನಡೆದಿದೆ.

    ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸುಮಾರು 3.30 ರ ಸುಮಾರಿಗೆ ಈ ದರೋಡೆ ಕೃತ್ಯ ನಡೆದಿದೆ. ಮನೆಯ ಕಿಟಕಿಯ ಸರಳುಗಳನ್ನು ತುಂಡರಿಸಿ ಮನೆ ಹೊಕ್ಕ ದರೋಡೆಕೋರರು ಮನೆಯಲ್ಲಿದ್ದ ವೃದ್ದರನ್ನು ಕೂಡಿ ಹಾಕಿ ಹಲ್ಲೆ ನಡೆಸಿ ದರೋಡೆ ಮಾಡಿ ಬಳಿಕ ಮನೆ ಮಾಲಿಕ ಕಾರೊಂದಿಗೆ ಪರಾರಿಯಾಗಿದ್ದಾರೆ.

    ಹಲ್ಲೆಯಿಂದ ಮನೆ ಮಾಲಿಕ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಂಡದಲ್ಲಿ 4 ಮಂದಿ ದರೋಡೆಕೋರು ಇದ್ದರೆಂದು ತಿಳಿದು ಬಂದಿದೆ. ಈ ಮನೆಯಲ್ಲಿ ವೃದ್ದರಿದ್ದು ಅವರ ಮಕ್ಕಳು ವಿದೇಶದಲ್ಲಿದ್ದಾರೆ. ಮನೆಯವರಿಗೆ ಮಾರಕಾಯುಧ ತೋರಿಸಿ, ಹಲ್ಲೆ ನಡೆಸಿ ಬೆದರಿಸಿ ದರೋಡೆ ಕೃತ್ಯ ನಡೆಸಿದ್ದಾರೆ. ಬಳಿಕ ಮನೆಯ ಕಾರಿನ ಕೀ ಪಡೆದು ಆ ಕಾರಿನಲ್ಲಿ ಉಡುಪಿಯತ್ತ ತೆರಳಿದ್ದಾರೆ.

    ಹೆಜಮಾಡಿ ಟೋಲ್ ಗೇಟ್ ಸಮೀಪ ಕಾರು ನಿಲ್ಲಿಸಿ ಪರಾರಿಯಾಗಿದ್ದಾರೆ. ಉರ್ವ ಪೊಲೀಸರು, ಹಿರಿಯ ಅಧಿಕಾರಿಗಳು, ಬೆರಳಚ್ಚು ತಜ್ಞರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಮುಲ್ಕಿ ಪೊಲೀಸರು ಕಾರನ್ನು ಪತ್ತೆಹಚ್ಚಿ, ವಶಕ್ಕೆ ಪಡೆದುಕೊಂಡಿದ್ದಾರೆ. 

    ಘಟನೆ ಬೆನ್ನಲ್ಲೇ ಪೊಲೀಸರು ದರೋಡೆಗೈದ ಮನೆಯ ಸುತ್ತಮುತ್ತ, ರಸ್ತೆ, ಹೆದ್ದಾರಿಯ ಸಿಸಿ ಕ್ಯಾಮೆರಾಗಳನ್ನು ಶೋಧ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply