Connect with us

    DAKSHINA KANNADA

    ಪ್ರಮಾಣ ತಳ್ಳಿಹಾಕಿದ ಶಕುಂತಲಾ ಶೆಟ್ಟಿ, ಕಾವು ಹೇಮನಾಥ ಶೆಟ್ಟಿ ವಿರುದ್ಧ ಪಕ್ಷ ವಿರೋಧಿ ಆರೋಪ…

    ಪುತ್ತೂರು, ನವೆಂಬರ್ 18: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅಭ್ಯರ್ಥಿತನ ಬಿಟ್ಟು ಕೊಡುವ ಪ್ರಮಾಣ ಮಾಡಿದ ವಿಚಾರ ಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ವ್ಯಂಗ್ಯವಾಡಿದ್ದಾರೆ.

    ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ, ಹೈಕಮಾಂಡ್ ತೀರ್ಮಾನಿಸಿ ಕೊಡುವ ಅಭ್ಯರ್ಥಿತನದ ಸೀಟು, ನಾನು ಈ ಬಾರಿ ಹೇಮನಾಥ ಶೆಟ್ಟಿಗೆ ಅಭ್ಯರ್ಥಿತನ ಬಿಟ್ಟುಕೊಡುವುದಾಗಿ ಪ್ರಮಾಣ ಮಾಡಿಯೇ ಇಲ್ಲ, ಹೀಗೆ ಪ್ರಮಾಣ ಮಾಡುವ ಪ್ರಮೇಯವೇ ಬರುವುದಿಲ್ಲ, ಹೈಕಮಾಂಡ್ ಮೂಲಕ ಆಯ್ಕೆಯಾದ ವ್ಯಕ್ತಿ ಇನ್ನೊಬ್ಬರಿಗೆ ಪಕ್ಷದ ಟಿಕೆಟ್ ಕೊಡುವಂತೆ ಸೂಚಿಸಲು ಸಾಧ್ಯವೂ ಇಲ್ಲ, ನಾನು ಪ್ರಮಾಣ ಮಾಡುವ ಮೊದಲು ಕಾವು ಹೇಮನಾಥ ಶೆಟ್ಟಿ ಪ್ರಮಾಣ ಮಾಡಬೇಕು.

    ಪಕ್ಷದಲ್ಲಿದ್ದು ಪಕ್ಷಕ್ಕೆ ದ್ರೊಹ ಮಾಡಿಲ್ಲ, ವಿರೋಧ ಪಕ್ಷದವರ ಜೊತೆ ಸೇರಿ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ಎನ್ನುವ ಪ್ರಮಾಣವನ್ನು ಹೇಮನಾಥ ಶೆಟ್ಟಿ ಮಾಡಬೇಕು. ಪ್ರಮಾಣ ಮಾಡಿದ್ದೇನೆ ಎನ್ನುವ ವಿಚಾರ ಸಂಪೂರ್ಣ ಸುಳ್ಳು ವಿರೋಧ ಪಕ್ಷದವರ ಅಣತಿಯಂತೆ ನಡೆಯುವ ಹೇಮನಾಥ ಶೆಟ್ಟಿ ಮೊದಲು ಪಕ್ಷಕ್ಕೆ ನಿಷ್ಠರಾಗಬೇಕು. ಆ ಬಳಿಕ ಅಭ್ಯರ್ಥಿತನದ ಬಗ್ಗೆ ಯೋಚಿಸಬೇಕು ಎಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply