MANGALORE
ರೌಡಿಸಂ ಮಟ್ಟ ಹಾಕಲು ಪ್ರತ್ಯೇಕ ಪೊಲೀಸ್ ತಂಡ – ಯು.ಟಿ ಖಾದರ್
ರೌಡಿಸಂ ಮಟ್ಟ ಹಾಕಲು ಪ್ರತ್ಯೇಕ ಪೊಲೀಸ್ ತಂಡ – ಯು.ಟಿ ಖಾದರ್
ಮಂಗಳೂರು ಅಕ್ಟೋಬರ್ 6: ಸಚಿವ ಯು.ಟಿ ಖಾದರ್ ಪ್ರತಿನಿಧಿಸುವ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರೌಡಿಗಳ ಗ್ಯಾಂಗ್ ವಾರ್ ಹಿನ್ನಲೆಯಲ್ಲಿ ಖಾದರ್ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸುಧೀರ್ಘ ಸಭೆ ನಡೆಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ ಖಾದರ್ ಇತ್ತೀಚೆಗೆ ಉಳ್ಳಾಲ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರೌಡಿಸಂ ಮಟ್ಟ ಹಾಕಲು ಎಸಿಪಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಪ್ರತ್ಯೇಕ ತಂಡ ರಚಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಜುಬೇರ್ ಹತ್ಯೆ ಪ್ರಕರಣದ ತನಿಖೆಗೆ ಎರಡು ತಂಡಗಳನ್ನು ಈಗಾಗಲೇ ರಚಿಸಲಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದವರು ಸ್ಪಷ್ಟಪಡಿಸಿದರು. ಜುಬೇರ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಶೀಘ್ರ ಬಂಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜುಬೇರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಕಾರಣಗಳನ್ನು ಮುಂದಿಟ್ಟು ಆರೋಪ ಮಾಡಿ ಪ್ರಯೋಜನ ಇಲ್ಲ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
You must be logged in to post a comment Login