Connect with us

    FILM

    ನಿರೂಪಣೆ ನೀವಿಲ್ಲದೇ ಅಪೂರ್ಣ – ಕಂಬನಿ ಮಿಡಿದ ಅನುಶ್ರೀ

    ಬೆಂಗಳೂರು ಜುಲೈ 12: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕ್ಯಾನ್ಸರ್ ನಿಂದಾಗಿ ನಿಧನರಾಗಿದ್ದಾರೆ. ಅಪರ್ಣಾ ಅವರ ನಿಧನಕ್ಕೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ. ನಿರೂಪಣೆ ವಿಭಾಗದಲ್ಲಿ ಹಲವು ವರ್ಷಗಳಿಂದ ನಟಿ ಜೊತೆ ಬಾಂಧವ್ಯ ಹೊಂದಿರುವ ನಿರೂಪಕಿ ಅನುಶ್ರೀ ಅವರು ಅಪರ್ಣಾ ನಿಧನಕ್ಕೆ ಭಾವುಕರಾಗಿದ್ದಾರೆ. ನಿರೂಪಣೆ ನೀವಿಲ್ಲದೇ ಅಪೂರ್ಣ ಎಂದು ಕಂಬನಿ ಮಿಡಿದಿದ್ದಾರೆ.

    ನಿರೂಪಣೆಗೆ ಘನತೆ ನೀವು, ಕನ್ನಡಕ್ಕೆ ಶೋಭೆ, ನಿರೂಪಣೆ ನೀವಿಲ್ಲದೆ ಅಪೂರ್ಣ ಅಪರ್ಣ ಅಕ್ಕ ಎಂದಿದ್ದಾರೆ ಅನುಶ್ರೀ. ಈ ವಿಚಾರ ನೋವು ತಂದಿದೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನಿಮ್ಮನ್ನು ಭೇಟಿಯಾದ ಕ್ಷಣ. ಇಂದಿಗೂ ಹಸಿರಾಗಿದೆ. ಅಂದು ಇಂದು ಎಂದೆಂದಿಗೂ ಕನ್ನಡಕ್ಕೆ ಒಬ್ಬರೇ ಮಹಾ ನಿರೂಪಕಿ ಅದು ನೀವು ಓಂ ಶಾಂತಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನುಶ್ರೀ ಬರೆದುಕೊಂಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply