DAKSHINA KANNADA
ಅರಂತೋಡು – ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರ
ಅರಂತೋಡು ಸೆಪ್ಟೆಂಬರ್ 24: ಕಂಟೈನರ್ ಲಾರಿ ಹಾಗೂ ಸ್ಕೂಟಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡಿನ ಜುನೈದ್ ಎಂದು ತಿಳಿದು ಬಂದಿದ್ದು ಆತನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎನ್ನಲಾಗಿದೆ ಢಿಕ್ಕಿಯ ರಭಸಕ್ಕೆ ಸ್ಕೂಟಿ ನುಜ್ಜುಗುಜ್ಜಾಗಿದೆ.
You must be logged in to post a comment Login