Connect with us

    LATEST NEWS

    ಉತ್ತರಾಖಂಡ್ ಸುರಂಗ ಕಾರ್ಯಾಚರಣೆ – 41 ಕಾರ್ಮಿಕರ ರಕ್ಷಣೆ ಕ್ರಿಸ್ಮಸ್ ವರೆಗೂ ನಡೆಯಬಹುದು

    ಉತ್ತರಕಾಶಿ ನವೆಂಬರ್ 25: ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆಗೆ ಇನ್ನೂ ಹೆಚ್ಚು ಸಮಯ ಬೇಕಾಗಬಹುದು ಎಂದು ಅಂತಾರಾಷ್ಟ್ರೀಯ ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್ ತಿಳಿಸಿದ್ದಾರೆ.


    ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಕಾರ್ಯಾಚರಣೆ ಸ್ವಲ್ಪ ಸಮಯ ಬೇಕಾಗಬಹುದು. 41 ಕಾರ್ಮಿಕರು ಸುರಕ್ಷಿತವಾಗಿ ಮನೆಗೆ ಸೇರುತ್ತಾರೆ.ಆದರೆ ಯಾವಾಗ ಎಂದು ನನಗೆ ಸರಿಯಾಗಿ ಗೊತ್ತಿಲ್ಲ. ನನ್ನ ಪ್ರಕಾರ ನಾವು ಆತುರಪಡಬಾರದು. ನಾವು ಅತ್ಯಂತ ಮುಖ್ಯವಾದ ವಿಷಯವನ್ನು ಪರಿಗಣಿಸಬೇಕು. ಕಾರ್ಮಿಕರು ಸುರಕ್ಷಿತವಾಗಿ ಮನೆಗೆ ಸೇರುತ್ತಾರೆ.ಅವರು ಕ್ರಿಸ್ಮಸ್ ಸಮಯದಲ್ಲಿ ಮನೆಗೆ ಬರುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದಿದ್ದಾರೆ.


    ”ಆರಂಭದಲ್ಲಿ, ಇದು ತ್ವರಿತವಾಗಿ ಆಗುತ್ತದೆ ಎಂದು ನಾನು ಎಂದಿಗೂ ಭರವಸೆ ನೀಡಲಿಲ್ಲ, ಅದು ಸುಲಭವಾಗುತ್ತದೆ ಎಂದು ನಾನು ಎಂದಿಗೂ ಭರವಸೆ ನೀಡಲಿಲ್ಲ, ನಾಳೆ ಎಂದು ನಾನು ಎಂದಿಗೂ ಹೇಳಲಿಲ್ಲ, ಅದು ಇಂದು ರಾತ್ರಿ ಎಂದೂ ನಾನು ಎಂದಿಗೂ ಹೇಳಲಿಲ್ಲ, ಆದರೆ ಅವರು ಸುರಕ್ಷಿತವಾಗಿರುತ್ತಾರೆ” ಎಂದು ಹೇಳಿಕೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply