DAKSHINA KANNADA
ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಗೆ ಕ್ರಿಕೆಟ್ ಬ್ಯಾಟ್ ಚಿಹ್ನೆ ನೀಡಿದ ಚುನಾವಣಾ ಆಯೋಗ
ಪುತ್ತೂರು ಎಪ್ರಿಲ್ 24 : ಬಿಜೆಪಿಯಿಂದ ಬಂಡಾಯ ಎದ್ದು ಪಕ್ಷೇತರನಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾನಣೆಗೆ ನಿಂತಿರುವ ಹಿಂದೂ ಸಂಘಟನೆಯ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಚುನಾವಣಾ ಆಯೋಗ ಬ್ಯಾಟ್ ಚಿಹ್ನೆಯನ್ನು ನೀಡಿದೆ.
ಬಿಜೆಪಿ ಕಾರ್ಯಕರ್ತರ ಭಾವನೆಗಳನ್ನು ಕಡೆಗಣಿಸಿ ಟಿಕೆಟ್ ನೀಡಿದೆ ಎಂದು ಆರೋಪಿಸಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ಚುನಾವಣೆಗೆ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲ ಎಂದಿರುವ ಅವರು ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿಗೆ ಟಕ್ಕರ್ ಕೊಡಲು ರೆಡಿಯಾಗಿದ್ದಾರೆ.
ಪುತ್ತಿಲ ಅವರ ಸ್ಪರ್ಧೆ ಖಚಿತವಾದ ಹಿನ್ನಲೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಚುನಾವಣಾ ಆಯೋಗ ‘ಬ್ಯಾಟ್’ ಚಿಹ್ನೆಯನ್ನು ನೀಡಿದೆ. ಪುತ್ತಿಲರ ಸ್ಪರ್ಧೆಯಿಂದ ಚುನಾವಣಾ ಕಣ ರಂಗೇರಿದು ಪುತ್ತೂರು ಹೈ ವೋಲ್ಟೇಜ್ ಕ್ಷೇತ್ರವಾಗಿ ಬದಲಾಗಿದೆ.
You must be logged in to post a comment Login