Connect with us

KARNATAKA

ಮನೆಯಲ್ಲೇ ಗುಂಡು ಹಾರಿಸಿಕೊಂಡು ನಿವೃತ್ತ ಎಎಸ್ಐ ಆತ್ಮಹತ್ಯೆ

ಮಡಿಕೇರಿ, ಜೂನ್ 23, ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಒಂದೇ ತಿಂಗಳಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ಸಮೀಪದ ಮದೆಗೋಡು ಗ್ರಾಮದಲ್ಲಿ ನಡೆದಿದೆ.

ಎಂ.ಎಸ್‌ ಈರಪ್ಪ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಒಂದು ವರ್ಷದಿಂದ ಶನಿವಾರಸಂತೆ ಪೊಲೀಸ್‌ ಠಾಣೆಯಲ್ಲಿ ಎ ಎಸ್‌ಐ ಆಗಿ ಸೇವೆ ಸಲ್ಲಿಸಿದ್ದ ಈರಪ್ಪ ಕಳೆದ ಮೇ 30 ರಂದು ನಿವೃತ್ತಿ ಹೊಂದಿದ್ದರು. ಆದರೆ‌ ಇಂದು ಬೆಳಿಗ್ಗೆ ಮದೆಗೋಡು ಗ್ರಾಮದ ತಮ್ಮ ಮನೆಯಲ್ಲೇ ಒಂಟಿ ನಳಿಕೆಯ ಬಂದೂಕು ಬಳಸಿ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *