ಅಸಿಫಾ ಹಾಗೂ ಉನಾವ್ ಪ್ರಕರಣದಲ್ಲಿ ನ್ಯಾಯಕ್ಕಾಗಿ ಮಂಗಳೂರಿನಲ್ಲಿ ಪ್ರತಿಭಟನೆ
ಮಂಗಳೂರು ಎಪ್ರಿಲ್ 14: ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ ಎಂದು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಜಾನೆಟ್ ಡಿಸೋಜಾ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಆಸಿಫಾ ಳ ಅತ್ಯಾಚಾರ ಹಾಗು ಕೊಲೆ ಪ್ರಕರಣ ದೇಶವೇ ತಲೆ ತಗ್ಗಿಸುವಂತಾಗಿದೆ. ಆಸಿಫಾ ಪ್ರಕರಣ ಬೆಳಕಿಗೆ ಬಂದ ಬಳಿಕ ದೇಶದಲ್ಲಿ ಮಹಿಳೆ ಮತ್ತು ಮಕ್ಕಳ ರಕ್ಷಣೆಯೇ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ ಎಂದು ಅವರು ಕಿಡಿಕಾರಿದರು.
ಆಸಿಫಾ ಹಾಗೂ ಉನಾವ್ ಗೆ ನ್ಯಾಯಕ್ಕಾಗಿ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಹೇಳಿದ ಅವರು ನಾಳೆ ಸಂಜೆ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಗಾಂಧಿ ಪ್ರತಿಮೆ ಎದುರು ಮಹಿಳಾ ಕಾಂಗ್ರೆಸ್ ವತಿಯಿಂದ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಮಹಿಳೆ ಹಾಗೂ ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರಿಗೆ ಕಾನೂನು ತಿದ್ದುಪಡಿ ತಂದು ಮರಣದಂಡನೆ ನೀಡಬೇಕು ಎಂದು ಹೇಳಿದ ಅವರು ಆಸಿಫಾ ಪ್ರಕರಣದಲ್ಲಿ ಚಕಾರ ವೆತ್ತದ ಪ್ರಧಾನಿ ಮೋದಿ ನಿನ್ನೆ ಈ ಕುರಿತು ಪ್ರಸ್ಥಾಪಿಸಿ ಆಸಿಫಾ ಳಿಗೆ ನ್ಯಾಯ ಒದಗಿಸಲಾಗುಗುವುದೆಂದು ಮಾತ್ರ ಎಂದು ಹೇಳಿದ್ದಾರೆ . ಮೋದಿ ಅವರು ಮನ್ ಕಿ ಬಾತ್ ನಲ್ಲಿ ಆಸಿಫಾಳಿಗೆ ನ್ಯಾಯ ಒದಗಿಸುವ ಕುರಿತು ಮಾತನಾಡಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.