Connect with us

LATEST NEWS

ತಮಿಳುನಾಡು – ರಥೋತ್ಸವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ 11 ಮಂದಿ ಸಾವು

ತಂಜಾವೂರು ಎಪ್ರಿಲ್ 27:ರಥೋತ್ಸವದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿರುವ ಘಟನೆ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ.

ತಮಿಳುನಾಡಿನ ತಾಂಜಾವೂರು ಜಿಲ್ಲೆಯ ಕಾಳಿಮೇಡು ಗ್ರಾಮದ ಅಪ್ಪರ್ ದೇವಸ್ಥಾನವೊಂದರಲ್ಲಿ ರಥೋತ್ಸವ ನಡೆಯುತ್ತಿತ್ತು.  ದೇವರ ರಥೋತ್ಸವ ಮುಗಿಸಿ ದೇವಸ್ಥಾನಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ರಥಕ್ಕೆ ಹೈ-ವೋಲ್ಟೇಜ್ ವಿದ್ಯುತ್ ತಂತಿ ತಗುಲಿದ ಪರಿಣಾಮ ಬಂಡಿ ಹೊತ್ತಿ ಉರಿದಿದೆ. ರಥದ ಸಮೀಪ ನಿಂತಿದ್ದ 11 ಮಂದಿ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗ್ರಾಮಸ್ಥರು ಅನುಮತಿಯಿಲ್ಲದೆ ರಥೋತ್ಸವ ನಡೆಸಿದ್ದಾರೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತರ ಕುಟುಂಬಸ್ಥರಿಗೆ ಸಂತಾಪ ವ್ಯಕ್ತಪಡಿಸಿದ್ದು, ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *