LATEST NEWS
ಆಂಧ್ರ ಪ್ರದೇಶ – ಭೀಕರ ರಸ್ತೆ ಅಪಘಾತಕ್ಕ 14 ಮಂದಿ ಸಾವು
ಆಂಧ್ರಪ್ರದೇಶ : ಬಸ್ಸು ಮತ್ತು ಟ್ರಕ್ ಮಧ್ಯೆ ಢಿಕ್ಕಿ ಸಂಭವಿಸಿ 14 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ವೆಲ್ದುರ್ತಿ ಮಂಡಲ್ ನ ಮಾದಾರ್ಪುರ್ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದೆ.
ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಢಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಮೃತಪಟ್ಟವರಲ್ಲಿ ಮಗು ಸೇರಿ ಎಂಟು ಮಹಿಳೆಯರು ಸೇರಿದ್ದಾರೆ. ಗಾಯಗೊಂಡವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ.
You must be logged in to post a comment Login