LATEST NEWS
ಎಟಿಎಂ ದರೋಡೆಗೆ ಯತ್ನಿಸಿ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳ
ಮಂಗಳೂರು ಫೆಬ್ರವರಿ 09: ಎಟಿಎಂ ಒಡೆದು ಹಣ ದರೋಡೆ ಯತ್ನಿಸಿ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಕಳ್ಳ ಸಿಕ್ಕಿ ಬಿದ್ದಿರುವ ಘಟನೆ ತೊಕ್ಕೊಟ್ಟು ಬಳಿ ಇರುವ ಬ್ಯಾಂಕ್ ಆಫ್ ಬರೋಡದ ಎಟಿಎಂ ನಲ್ಲಿ ನಡೆದಿದೆ.
ಬಂಧಿತನನ್ನು ಕೊಪ್ಪಳ ಜಿಲ್ಲೆಯ ಬಾಚನಳ್ಳಿಯ ಬೀರಪ್ಪ ಎಂದು ಗುರುತಿಸಲಾಗಿದೆ. ನಸುಕಿನ ಜಾವ ಸುಮಾರು 2 ಗಂಟೆ ವೇಳೆಗೆ ಎಟಿಎಂಗೆ ನುಗ್ಗಿದ ಆರೋಪಿ ಎಟಿಎಂ ಯಂತ್ರವನ್ನು ಜಖಂಗೊಳಿಸಿ ಹಣ ದೋಚಲು ಯತ್ನಿಸಿದ್ದಾನೆ.
ಆದರೆ ಎಟಿಎಂ ಯಂತ್ರದಿಂದ ಹಣ ಹೊರಬಂದಿಲ್ಲ. ಈತನ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಈ ವೇಳೆ ಬ್ಯಾಂಕ್ ಎಟಿಎಂ ಕಣ್ಗಾವಲು ಅಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಟಿಎಂನಿಂದ ನಗದು ಕಳವು ಮಾಡಿಲ್ಲ, ಆದರೆ ಕಳವು ಯತ್ನ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
You must be logged in to post a comment Login