Connect with us

BELTHANGADI

ಬೆಳ್ತಂಗಡಿ -ಅಣ್ಣ ತಮ್ಮನ ಮೇಲೆ ತಲ್ವಾರ್ ದಾಳಿ – ಆರೋಪಿಗಳು ಪೊಲೀಸ್ ವಶಕ್ಕೆ

ಬೆಳ್ತಂಗಡಿ ನವೆಂಬರ್ 14:ಸಹೋದರರ ಮೇಲೆ ದುಷ್ಕರ್ಮಿಗಳ ತಂಡವೊಂದು ತಲ್ವಾರ್ ದಾಳಿ ನಡೆಸಿರುವ ಘಟನೆ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಹಲ್ಲೆಯಲ್ಲಿ ಸಹೋದರರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಹಲ್ಲೆಗೊಳಗಾದವರನ್ನು ಗೋವಿಂದೂರು ಶಾಲೆಯ ಬಳಿ ನೆಲ್ಲಿಗುಡ್ಡೆ ನಿವಾಸಿ ಆಟೋ ಚಾಲಕ ಹೈದರ್ ಹಾಗೂ ಆತನ ಅಣ್ಣ ರಫೀಕ್ ಎಂದು ಗುರುತಿಸಲಾಗಿದ್ದು, ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ರಾತ್ರಿಯೇ ಬಂಧಿಸಿದ್ದಾರೆ.
ತಲವಾರು ದಾಳಿ ನಡೆಸಿ ಕೊಲೆಯತ್ನ ನಡೆಸಿದ ಆರೋಪಿಗಳಾದ ಇದೇ ಪರಿಸರದ ನಿವಾಸಿ ಅಶುತೋಷ್ ಹಾಗೂ ಆತನ ಇಬ್ಬರು ಸಹಚರರನ್ನು ತಡರಾತ್ರಿಯೇ ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ರಾತ್ತಿಯ ವೇಳೆ ಹೈದರ್ ಹಾಗೂ ರಫೀಕ್ ತಮ್ಮ ರಿಕ್ಷಾದಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಶುತೋಷ್ ಹಾಗೂ ಇತರ ಇಬ್ಬರು ಅವರನ್ನು ಅಡ್ಡಗಟ್ಟಿ ದಾಳಿ ನಡೆಸಿರುವುದಾಗಿ ಆರೋಪಿಸಲಾಗಿದೆ. ಇಬ್ಬರ ಮೇಲೂ ತಲವಾರಿನಿಂದ ದಾಳಿ ನಡೆಸಲಾಗಿದ್ದು, ಚೂರಿಯಿಂದ ಇರಿಯಲಾಗಿದೆ. ಇದರಿಂದ ಹೈದರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ರಫೀಕ್ ಕೂಡಾ ಗಾಯಗೊಂಡಿದ್ದಾರೆ. ಬೊಬ್ಬೆ ಕೇಳಿ ಸ್ಥಳಿಯರು ಘಟನಾ ಸ್ಥಳಕ್ಕೆ ಧಾವಿಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಳುಗಳಿಬ್ಬರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *