Connect with us

    LATEST NEWS

    ಬೈಕಂಪಾಡಿ – ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ದಾಳಿ

    ಮಂಗಳೂರು ಜೂನ್ 06: ಯುವಕನೊಬ್ಬನನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬೈಕಂಪಾಡಿ ಜಂಕ್ಷನ್‌ ಬಳಿ ಸಂಜೆ ನಡೆದಿದೆ.


    ಹಲ್ಲೆಗೊಳಗಾದವರನ್ನು ರವಿರಾಜ್‌ ಬಂಗೇರ ಎಂದು ಗುರುತಿಸಲಾಗಿದ್ದು, ಇಬ್ಬರು ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ರವಿರಾಜ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿರಾಜ್‌ ಬಂಗೇರ ಎರಡು – ಮೂರು ಪ್ರಕರಣಗಳಲ್ಲಿ ಆರೋಪಿ ಆಗಿದ್ದ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply