Connect with us

    DAKSHINA KANNADA

    ಆಡಿನ ವಿಚಾರಕ್ಕೆ ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳಿಗೆ ದೊಣ್ಣೆಯಿಂದ ಹಲ್ಲೆ

    ಉಪ್ಪಿನಂಗಡಿ ಅಕ್ಟೋಬರ್ 15: ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ. ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ ಸಿಬಂದಿಗಳಾದ ಜೂನಿಯರ್ ಲೈನ್ ಮ್ಯಾನ್ ವಿತೇಶ್ ಮತ್ತು ಸಿಬ್ಬಂದಿ ಸತೀಶ್ ಹಿರೆಬಂಡಾಡಿ ಹಲ್ಲೆಗೊಳಗಾದವರು.


    ಹಲ್ಲೆಗೊಳಗಾಗಿ ಗಾಯಗೊಂಡಿರುವ ಅವರಿಬ್ಬರು ಪುತ್ತೂರು ಸರಕಾರಿ ಆಸ್ಫತ್ರೆಯಲ್ಲಿ ದಾಖಲಾಗಿದ್ದಾರೆ, ದೊಣ್ಣೆಯಿಂದ ಹಲ್ಲೆ ನಡೆಸಿದಾತ ಉಪ್ಪಿನಂಗಡಿ ಗ್ರಾಮದ ಪರಾರಿ ನಿವಾಸಿ ಇಸುಬು ಎಂದು ಗುರುತಿಸಲಾಗಿದೆ. ಇಸುಬು ಬಳಿ ಸುಮಾರು 50 ಆಡುಗಳಿದ್ದು ಅದನ್ನು ಅವರು ನಿತ್ಯ ಉಪ್ಪಿನಂಗಡಿ ಪೇಟೆ ಹಾಗೂ ಇತರೆಡೆ ಮೇಯಿಸುತ್ತಾರೆ ಎಂದು ಹೇಳಲಾಗುತ್ತಿದೆ. ಇದರಿಂದ ವಾಹನ ಸಂಚಾರಕ್ಕೆ ತೊಡಕು ಉಂಟಾದ, ಸಣ್ಣಪುಟ್ಟ ಅಪಘಾತಗಳು ನಡೆದ ಹಲವು ಘಟನೆಗಳು ನಡೆದು ವಾಗ್ವಾದದಲ್ಲಿ ಮುಕ್ತಾಯಗೊಂಡಿದೆ ಎನ್ನಲಾಗಿದೆ.

    ಇಂದು ಕೂಡ 30-40 ಆಡುಗಳು ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ಹೊಕ್ಕು ಅಲ್ಲಿದ್ದ ಹೂವಿನ ಗಿಡ ಹಾಗೂ ಇತರೆ ಗಿಡಗಳನ್ನು ತಿಂದಿವೆ. ಅಲ್ಲಿದ್ದ ಸಿಬಂದಿಗಳು ಆಡುಗಳನ್ನು ಓಡಿಸಿದ್ದಾರೆ. ಅಗ ಆಡುಗಳು ಚೆಲ್ಲಾಪಿಲ್ಲಿಯಾಗಿ ಓಡಿವೆ. ಇದರಿಂದ ಕೆರಳಿದ ಇಸುಬು ದೊಣ್ಣೆ ಹಿಡ್ಕೊಂಡು ಮೆಸ್ಕಾಂ ಕಚೇರಿ ಬಳಿ ಬಂದು ಮೆಸ್ಕಾಂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply