Connect with us

    BANTWAL

    ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ಮೇಲೆ ದುಷ್ಕರ್ಮಿಗಳಿಂದ ದಾಳಿ

    ಬಂಟ್ವಾಳ ಅಗಸ್ಟ್ 7: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ ನಡೆದಿದೆ.


    ಆದರೆ ಆತ ಓಡಿ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಂಪಾಡಿ ಶಾರದಾ ನಗರದ ನಿವಾಸಿಯಾದ ಶರೀಫ್ ಮನೆಯಿಂದ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎರಡು ಬೈಕ್, ಒಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ ಎನ್ನಲಾಗಿದೆ. ಶರೀಫ್ ತೆರಳುತ್ತಿದ್ದ ಬೈಕಿಗೆ ದುಷ್ಕರ್ಮಿಗಳು ಬಂದ ಬೈಕನ್ನು ಢಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ್ದಾರೆ.

    ಈ ಸಂದರ್ಭ ಬೈಕ್ ನಲ್ಲಿದ್ದ ಹಿಂಬದಿ ಸವಾರರು ಮತ್ತು ಕಾರಿನಲ್ಲಿದ್ದವರು ಇಳಿದು ಶರೀಫ್ ಗೆ ತಲವಾರು ಬೀಸಿದ್ದಾರೆ. ಅಪಾಯದ ಅರಿವಾದ ಶರೀಫ್ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಯಾಳು ಶರೀಫ್ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply