DAKSHINA KANNADA
ತುರವೇ ಕಛೇರಿ ಮೇಲೆ ದುಷ್ಕರ್ಮಿಗಳ ದಾಳಿ
ತುರವೇ ಕಛೇರಿ ಮೇಲೆ ದುಷ್ಕರ್ಮಿಗಳ ದಾಳಿ
ಮಂಗಳೂರು, ಸೆಪ್ಟೆಂಬರ್ 18 : ತುಳು ನಾಡ ರಕ್ಷಣಾ ವೇದಿಕೆಯ ಶಾಖಾ ಕಚೇರಿಯ ಮೇಲೆ ಕಿಡಿಗೇಡಿಗಳ ದಾಳಿ ನಡೆದಿದೆ. ಮಂಗಳೂರಿನ ಕೊಣಾಜೆ ಕುತ್ತಾರಿನಲ್ಲಿ ಈ ಘಟನೆ ನಡೆದಿದೆ. ಕಳೆದ ತಡರಾತ್ರಿ ಏಕಾಏಕಿ ಕುತ್ತಾರಿನ ತುಳುನಾಡ ರಕ್ಷಣಾವೇದಿಕೆಯ ಕಚೇರಿಗೆ ನುಗ್ಗಿ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ.
ಕುತ್ತಾರು ಜಂಕ್ಷನ್ನಲ್ಲಿರುವ ವಾಣಿಜ್ಯ ಕಟ್ಟಡವೊಂದರ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ತು.ರ.ವೇ ಕಚೇರಿಗೆ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ನುಗ್ಗಿದ್ದಾರೆ. ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಕಛೇರಿಯಲ್ಲಿ ಹಾಕಲಾಗಿದ್ದ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಮತ್ತು ಸಾಧನೆಗಳ ಫೋಟೊ ಸೇರಿದಂತೆ ಕಚೇರಿಯಲ್ಲಿದ್ದ ಬೃಹತ್ ಕಟೌಟಗಳನ್ನು, ಪೀಠೋಪಕರಣಗಳನ್ನು ಹಾನಿಗೊಳಿಸಿದ್ದಾರೆ.
ಘಟನೆಯು ಸೋಮವಾರ ಸಂಜೆ ಬೆಳಕಿಗೆ ಬಂದಿದ್ದು, ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ ತು.ರ.ವೇ ಕ್ಷೇತ್ರಾಧ್ಯಕ್ಷ ಸಿರಾಜ್ ಅಡ್ಕರೆ ಅವರು ತಕ್ಷಣ ಉಳ್ಳಾಲ ಪೊಲೀಸರಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.
ಸಂಘಟನೆಯ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕೆಂದು ತು.ರ.ವೇ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಅವರು ಉಳ್ಳಾಲ ಪೊಲೀಸರಿಗೆ ಒತ್ತಾಯಿಸಿದ್ದಾರೆ.
You must be logged in to post a comment Login