Connect with us

BANTWAL

ಮೊಬೈಲ್ ಕಳ್ಳತನ ಆರೋಪಿಸಿ ಯುವಕನ ಮೇಲೆ ಹಲ್ಲೆ – ಐವರು ಆರೋಪಿಗಳ ವಿರುದ್ದ ಪ್ರಕರಣ ದಾಖಲು

ಬಂಟ್ವಾಳ 22: ಮೊಬೈಲ್‌ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿದ 5 ಜನ ಆರೋಪಿಗಳ ವಿರುದ್ದ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು. ಯುವಕನೊಬ್ಬನಿಗೆ ಯುವಕರ ಗುಂಪೊಂದು ಹಿಗ್ಗಾಮುಗ್ಗ ಥಳಿಸುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆ ಕುರಿತಂತೆ ಹಲ್ಲೆಗೊಳಗಾದ ಯುವ ಉದಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.


ನಿನ್ನೆ ಬೆಳಿಗ್ಗೆ 11.00 ಗಂಟೆಗೆ ಬಂಟ್ವಾಳ ಬಾಳ್ತಿಲ ಗ್ರಾಮದ ನಿವಾಸಿ ಉದಯ ಎನ್ನುವವರು ಕಲ್ಲಡ್ಕ ಪಳನೀರ ಎಂಬಲ್ಲಿ ನಡೆದುಕೊಂಡು ಬರುತ್ತಿರುವ ಸಂದರ್ಭ ಆತನ ಪರಿಚಯದ ವೀರಕಂಭ ನಿವಾಸಿ ಶ್ರೀನಿವಾಸ, ಕಲ್ಲಡ್ಕ ನಿವಾಸಿ ಪ್ರಶಾಂತ್ ಹಾಗೂ ಇನ್ನೂ ಕೆಲವರು ಒಂದು ಆಕ್ಟೀವಾ ಮತ್ತು ರಿಕ್ಷಾದಲ್ಲಿ ಬಂದು ಉದಯ ಎಂಬವರನ್ನು ತಡೆದು ನಿಲ್ಲಿಸಿ, ಅವ್ಯಾಚ ಶಬ್ದಗಳಿಂದ ಬೈದು, ಕೈಯಿಂದ ಮತ್ತು ಮರದ ಕೋಲಿನಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಉದಯ ಜೋರಾಗಿ ಬೊಬ್ಬೆ ಹೊಡೆದಾಗ ಆರೋಪಿಗಳು ಮರದ ಕೋಲನ್ನು ಅಲ್ಲಿಯೇ ಬಿಸಾಡಿ, ಜೀವ ಬೆದರಿಕೆ ಹಾಕಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.


ಮೊಬೈಲ್‌ ತೆಗೆದಿರುವ ಬಗ್ಗೆ ಸಂಶಯಗೊಂಡು ಆರೋಪಿಗಳು ಹಲ್ಲೆ ನಡೆಸಿರುವುದಾಗಿ ಉದಯ ದೂರು ನೀಡಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಸಚ್ಚು, ಪಚ್ಚು, ಶ್ರೀನಿವಾಸ್, ಚಂದ್ರ, ಹರೀಶ್ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *