Connect with us

    BELTHANGADI

    ಬೈಕ್ ಸವಾರರಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ

    ಬೈಕ್ ಸವಾರರಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ

    ಮಂಗಳೂರು ಜನವರಿ 30: ಧರ್ಮಸ್ಥಳ ಪೊಲೀಸ್ ಠಾಣೆಯ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಬೈಕ್ ಸವಾರರು ಹಲ್ಲೆ ಮಾಡಿದ ಘಟನೆ ನಡೆದಿದೆ.

    ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಬರುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಈ ಘಟನೆ ನಡೆದಿದೆ.

    ಸಂಜೆ 4 ಗಂಟೆ ಸುಮಾರಿಗೆ ಬಜಾಜ್ ಕೆಎ 10 ಆರ್ 4045 ವಾಹನವನ್ನು ನಿಲ್ಲಿಸುವಂತೆ ಪೊಲೀಸ್ ಸಿಬ್ಬಂದಿ ಹೇಳಿದಾಗ, ವಾಹನ ಸವಾರ ವಾಹನವನ್ನು ನಿಲ್ಲಿಸಿ ಓಡಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಒರ್ವ ಸವಾರನನ್ನು ಹಿಡಿದುಕೊಂಡ ಸಂದರ್ಭ ಇನ್ನೊಬ್ಬ ಏಕಾಏಕಿ ಪೊಲೀಸ್ ಸಿಬ್ಬಂದಿ ಮೇಲೆ ಎಗರಿ ಇಬ್ಬರು ಸೇರಿ ಹಲ್ಲೆ ಮಾಡಿದ್ದಾರೆ.

    ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಜಾವೇದ್ ಗೆ ಹೊಟ್ಟೆ, ಕೈ, ಕಾಲು ಗಳಿಗೆ ಕೈಗಳಿಂದ ಗುದ್ದಿ ಗಾಯ ಮಾಡಿರುತ್ತಾರೆ. ಒರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಇನ್ನೊರ್ವ ಆರೋಪಿ ಪರಾರಿಯಾಗಿದ್ದಾನೆ. ಗಾಯಗೊಂಡ ಪೊಲೀಸ್ ಸಿಬ್ಬಂದಿ ಜಾವೇದ್ ರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    Share Information
    Advertisement
    Click to comment

    You must be logged in to post a comment Login

    Leave a Reply