KARNATAKA
ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಪ್ರಮುಖ ಸಾಕ್ಷಿದಾರ ರಾಮಕುಮಾರ್ ಕೊಲೆಗೆ ಯತ್ನ, ದೂರು ದಾಖಲು..!
ಚಿಕ್ಕಮಗಳೂರು : ಚೈತ್ರಾ ಗ್ಯಾಂಗ್ನಿಂದ ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ತೆಗೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಧನರಾಜ್ ಎಂಬಾತ ಬೇಲ್ ಮೇಲೆ ಜೈಲಿನಿಂದ ಹೊರಬಂದು ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಸಲೂನ್ ಮಾಲೀಕ ರಾಮು ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಿದ ಘಟನೆ ಚಿಕ್ಕಮಗಳೂರಿನ ಕಡೂರಿನಲ್ಲಿ ಬೆಳಕಿಗೆ ಬಂದಿದೆ.
ಟಿಕೆಟ್ ಡೀಲ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರನಾಗಿರುವ ರಾಮಕುಮಾರ್ ಕೊಲೆಗೆ ಯತ್ನಿಸಲಾಗಿದೆ ಎಂಬ ಆರೋಪ ಕೆಳಿ ಬಂದಿದೆ. ಸಲೂನ್ ಮಾಲೀಕನಾಗಿರುವ ರಾಮಕುಮಾರ್ ಮೇಲೆ ಚಿಕ್ಕಮಗಳೂರಿನ ಕಡೂರಿನಲ್ಲಿ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ. ಗೋವಿಂದ ಪೂಜಾರಿ ಟಿಕೆಟ್ ವಂಚನೆ ಆರೋಪಿಗಳಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ನಕಲಿ ಪ್ರಚಾರಕನನ್ನು ಸೃಷ್ಟಿಸಿದ್ದ ಸಲೂನ್ ಮಾಲೀಕನ ಮೇಲೆ ದಾಳಿಗೆ ಯತ್ನಿಸಲಾಗಿದೆ.
ಗೋವಿಂದ ಪೂಜಾರಿ ವಂಚನೆ ಕೇಸ್ನಲ್ಲಿ ರಾಮಕುಮಾರ್ ಪ್ರಮುಖ ಸಾಕ್ಷಿಯಾಗಿದ್ದಾನೆ. ಗಗನ್ ಕಡೂರು ಕಡೆಯವರಿಂದ ದಾಳಿ ನಡೆದಿದೆ ಎಂದು ರಾಮಕುಮಾರ್ ಆರೋಪಿಸಿದ್ದಾರೆ. ಈ ಬಗ್ಗೆ ಮೊದಲಿಗೆ ಕಡೂರು ಠಾಣೆಯಲ್ಲಿ ದೂರು ನೀಡಲಾಗಿತ್ತು ಸರಹದ್ದು ಸಮಸ್ಯೆ ಕಾರಣಕ್ಕಾಗಿ ಬೀರೂರು ಠಾಣೆಗೆ ತೆರಳಿ ದೂರು ನೀಡಲಾಗಿದೆ. ಹಲ್ಲೆ, ಗಾಯ ಬಗ್ಗೆ ವೈದ್ಯಕೀಯ ವರದಿ ಇದ್ದರೂ ಪೊಲೀಸರು FIR ದಾಖಲಿಸಲಿಲ್ಲ ಎಂದು ರಾಮ್ ಕುಮಾರ್ ಆರೋಪಿಸಿದ್ದು ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಎಸ್ಪಿಗೆ ದೂರು ನೀಡಿದ್ದು ತನಗೆ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದಾರೆ.
You must be logged in to post a comment Login