Connect with us

DAKSHINA KANNADA

ಅನ್ಯಕೋಮಿನ ವ್ಯಕ್ತಿ ಮೇಲೆ ತಲವಾರು ದಾಳಿ ಯತ್ನ: ಮೂವರು ಆರೋಪಿಗಳ ಬಂಧನ

Share Information

ಮಂಗಳೂರು, ಆಗಸ್ಟ್ 22: ಅನ್ಯಕೋಮಿನ ವ್ಯಕ್ತಿ ಮೇಲೆ ತಂಡದಿಂದ ತಲವಾರು ದಾಳಿಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಕಾವೂರು ಪೋಲಿಸರು ಬಂಧಿಸಿದ್ದಾರೆ.

ಮಂಗಳೂರು ಹೊರವಲಯದ ಕಾವೂರು ಎಂ.ವಿ.ಶೆಟ್ಟಿ ಕಾಲೇಜು ಬಳಿ ಅನ್ಯಕೋಮಿನ ವ್ಯಕ್ತಿ ಮೇಲೆ ತಂಡದಿಂದ ತಲವಾರು ದಾಳಿಗೆ ಯತ್ನಿಸಿದ್ದ ಘಟನೆಗೆ ಸಂಬಂಧಿಸಿದಂತೆ ಪಂಜಿಮೊಗರು ನಿವಾಸಿ ಚರಣ್ ರಾಜ್ (23), ಸುಮಂತ್‌ ಬರ್ಮನ್‌ (24), ಅವಿನಾಶ್ (24) ಬಂಧಿತ ಆರೋಪಿಗಳು.

ಆ.20ರಂದು ಸ್ಕೂಟಿಯಲ್ಲಿ ಬಂದು ಅಡ್ಡಹಾಕಿ ತಡೆದು ಅನ್ಯ ಕೋಮಿನ ವ್ಯಕ್ತಿ ಮೇಲೆ ತಲವಾರು ಬೀಸಿದ್ದರು. ಈ ವೇಳೆ ತಪ್ಪಿಸಿಕೊಂಡರೂ ಮುಖಕ್ಕೆ ಗಾಯವಾಗಿತ್ತು, ಸದ್ಯ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳ ಬಂಧನವಾಗಿದೆ. ಕೃತ್ಯಕ್ಕೆ ಬಳಸಿದ ತಲವಾರು, ವಾಹನವನ್ನು ಪೊಲೀಸರು ವಶಕ್ಕೆ ಪಡೆದು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


Share Information
Advertisement
Click to comment

You must be logged in to post a comment Login

Leave a Reply