Connect with us

DAKSHINA KANNADA

ಉಳ್ಳಾಲದಲ್ಲಿ ಮಾರಕಾಸ್ತ್ರಗಳಿಂದ ದಾಳಿ ಯತ್ನ ಸುಳ್ಳು ಸುದ್ದಿ: ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌

ಮಂಗಳೂರು, ಆಗಸ್ಟ್ 03: ಉಳ್ಳಾಲದಲ್ಲಿ ಇಂದು ಬೆಳಗ್ಗೆ ತನ್ನ ಮೇಲೆ ತಂಡವೊಂದು ಕೊಲೆಗೆ ಯತ್ನಿಸಿದ್ದು ಎಂದು ಸುಳ್ಳು ಸುದ್ದಿ ಹರಡುತ್ತಿದೆ. ಈ ಬಗ್ಗೆ ಸುಳ್ಳು ಕಥೆ ಕಟ್ಟಿದ ಯುವಕನೋರ್ವನ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

ಉಚ್ಚಿಲ ಜಾಲ ಹಿತ್ತಿಲು ನಿವಾಸಿ ಕಿಶೋರ್‌ ಸಾಲ್ಯಾನ್‌ ಎಂಬಾತ ಇಂದು ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ತನ್ನ ಮೇಲೆ ಆಗಂತುಕರ ತಂಡವೊಂದು ಮಾರಾಕಾಸ್ತ್ರಗಳಿಂದ ಹಿಡಿದು ಅಟ್ಟಾಡಿಸಿದ್ದಾರೆ ಎಂದು ಮನೆಗೆ ಬಂದು ಹೇಳಿದ್ದಾರೆ.

ಕ್ಷಣಾರ್ಧದಲ್ಲಿ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಈ ಬಗ್ಗೆ ಆತನನ್ನು ನಾನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದು,

ಆತನೇ ಮನೆಗೆ ಬಂದು ಸುಳ್ಳು ಸುದ್ದಿ ಸೃಷ್ಟಿಸಿದ್ದಾನೆ. ಆತನ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್‌ ಕಮೀಷನರ್‌ ಸ್ಪಷ್ಟಪಡಿಸಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply