Connect with us

FILM

ಬಿಗ್ ಬಾಸ್ ಸ್ಪರ್ಧಿಯ ಮೇಲೆ ದಾಖಲಾಯ್ತು ಅಟ್ರಾಸಿಟಿ ಕೇಸ್

ಬೆಂಗಳೂರು ನವೆಂಬರ್ 14- ಈ ಬಾರಿಯ ಕನ್ನಡ ಬಿಗ್ ಬಾಸ್ ಸೀಸನ್ ಹೆಚ್ಚು ಸುದ್ದಿಯಲ್ಲಿದ್ದು, ಇತ್ತೀಚೆಗಷ್ಟೇ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರಿನ ವಿಚಾರದಲ್ಲಿ ಜೈಲು ಕಂಬಿ ಎಣಿಸಿ ಬಂದಿದ್ದರು. ಇದೀಗ ಬಿಗ್ ಬಾಸ್ ನ ಮತ್ತೊಂದು ಸ್ಪರ್ಧಿ ತನಿಷಾ ಅವರು ಜಾತಿ ನಿಂದನೆ ಮಾಡಿದ್ದಾರೆ ಎಂದು ಅವರ ಮೇಲೆ ಎಸ್‌ಸಿಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಟಿ ತನಿಷಾ ಕುಪ್ಪಂಡ ವಿರುದ್ಧ ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರಿಂದ ನವೆಂಬರ್ 11ರಂದು ದೂರು ದಾಖಲಾಗಿದ್ದು, ನವೆಂಬರ್‌ 12 ದೂರಿನ ಆಧಾರದ ಮೇಲೆ‌ ಕುಂಬಳಗೂಡು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅವಹೇಳನಕಾರಿ ಪದ ಬಳಕೆ ಬಗ್ಗೆ ತನಿಷಾ ವಿರುದ್ಧ ಆರೋಪ ಎದುರಾಗಿದೆ.

ಡ್ರೋನ್ ಪ್ರತಾಪ್‌ಗೆ ಮಾತನಾಡುವ ಭರದಲ್ಲಿ ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು ಎಂದು ಆಗ್ರಹಿಸಿ ಎಸ್‌ಸಿಎಸ್ಟಿ ಕಾಯ್ದೆಯಡಿ ದೂರು ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *