LATEST NEWS
ಕೊರೊನೊ ಹಿನ್ನಲೆ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಮುಂದೂಡಿಕೆ
ಉಡುಪಿ ಜನವರಿ 12: ಕೊರೊನಾ ಸೊಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನಲೆ ಕಾರ್ಕಳ ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ನವೇನ ಪ್ರಾರ್ಥನೆ ಹಾಗೂ ಮಹೋತ್ಸವವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ.
ಜನವರಿ 16 ರಿಂದ 27 ರವರೆಗೆ ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ನವೇನ ಪ್ರಾರ್ಥನೆ ಹಾಗೂ ಮಹೋತ್ಸವವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ ಎಂದು ಬಸಿಲಿಕಾದ ನಿರ್ದೇಶಕರಾದ ಆಲ್ಬನ್ ಡಿʼಸೋಜಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮುಂದೂಡಲ್ಪಟ್ಟ ವಾರ್ಷಿಕ ಮಹೋತ್ಸವದ ದಿನಾಂಕವನ್ನು ಸೂಕ್ತ ಸಮಯದಲ್ಲಿ ಭಕ್ತಾದಿಗಳಿಗೆ ತಿಳಿಸಲಾಗುವುದು ಭಕ್ತಾದಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
You must be logged in to post a comment Login